<p><strong>ಕುಂದಾಪುರ:</strong> ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ಪ್ರವರ್ಗ ’ಎ’ ದರ್ಜೆಯ ದೇವಸ್ಥಾನಗಳಲ್ಲಿ ಪ್ರಮುಖಕ್ಷೇತ್ರವಾಗಿರುವ ಕೊಲ್ಲೂರಿನ ಮೂಕಾಂಬಿಕಾ ದೇವಸ್ಥಾನಕ್ಕೆ ಕಳೆದ ವರ್ಷದ ಮಾರ್ಚ್, ಎಪ್ರಿಲ್ ಹಾಗೂ ಮೇ ತಿಂಗಳಲ್ಲಿ ಬಂದಿರುವ ಆದಾಯಕ್ಕೆ ಹೋಲಿಸಿದ್ದಲ್ಲಿ ಈ ಬಾರಿಯ ಆದಾಯದಲ್ಲಿ ಕಡಿಮೆಯಾಗಿರುವ ಬಗ್ಗೆ ದೇವಸ್ಥಾನದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.</p>.<p>2019 ನೇ ಮಾರ್ಚ್, ಏಪ್ರಿಲ್ ಹಾಗೂ ಮೇ ಮೂರು ತಿಂಗಳ ಅವಧಿಯಲ್ಲಿ ದೇವಸ್ಥಾನಕ್ಕೆ 13 ಕೋಟಿ ಆದಾಯ ಬಂದಿದ್ದು, ಇದೀಗ ದೇಶಾದ್ಯಾಂತ ಕೊವಿಡ್–19 ರ ಕಾರಣದಿಂದ ಲಾಕ್ ಡೌನ್ ಆಗಿರುವುದರಿಂದ ಈ ಮೂರು ತಿಂಗಳ ಅವಧಿಯಲ್ಲಿ ಅಂದಾಜು 14 ಕೋಟಿ ಆದಾಯ ಕಡಿಮೆಯಾಗಿದೆ ಎಂದು ದೇಗುಲದ ಕಾರ್ಯನಿರ್ವಹಣಾಧಿಕಾರಿಯವರ ಪ್ರಕಟಣೆಯಲ್ಲಿ ತಿಳಿಸಲಾಗಿದೆ.</p>.<p>ಕೊವಿಡ್ ಕಾರಣದಿಂದ ದೇವಸ್ಥಾನಗಳಿಗೆ ಪ್ರವೇಶ ನಿರ್ಬಂಧ ಇರುವುದರಿಂದ ಸೇವೆ ಮಾಡುವ ಭಕ್ತಾದಿಗಳು ಆನ್ಲೈನ್ ಮೂಲಕ ಸೇವೆಗಳಿಗೆ ಹಣ ಸಂದಾಯ ಮಾಡಬಹುದು.</p>.<p>ಸೇವೆ ಮಾಡಲು ಇಚ್ಚಿಸುವ ಭಕ್ತಾಧಿಗಳು ಕೊಲ್ಲೂರಿನ ಸಿಂಡಿಕೇಟ್ (ಕೆನರಾ) ಬ್ಯಾಂಕ್ನ ದೇವಸ್ಥಾನದ ಉಳಿತಾಯ ಖಾತೆ ಸಂಖ್ಯೆ 01752200000014 ( ಐಎಫ್ಸಿ ಸಂಖ್ಯೆ : ಎಸ್ವೈಎನ್ಬಿ 0000175) ಅಥವಾ ಕೊಲ್ಲೂರಿನ ವಿಜಯ ಬ್ಯಾಂಕ್ ( ಬ್ಯಾಂಕ್ ಆಫ್ ಬರೋಡಾ ) ಖಾತೆ ಸಂಖ್ಯೆ 142801011000001 ( ಐಎಫ್ಸಿ ಸಂಖ್ಯೆ : ವಿಐಜೆಬಿ0001428) ಗೆ ಹಣ ಸಂದಾಯ ಮಾಡಬಹುದು. ಹೆಚ್ಚಿನ ಮಾಹಿತಿಗಾಗಿ kollurmookambika.org ಮೂಲಕ ವಿವರ ಪಡೆದುಕೊಳ್ಳುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಂದಾಪುರ:</strong> ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ಪ್ರವರ್ಗ ’ಎ’ ದರ್ಜೆಯ ದೇವಸ್ಥಾನಗಳಲ್ಲಿ ಪ್ರಮುಖಕ್ಷೇತ್ರವಾಗಿರುವ ಕೊಲ್ಲೂರಿನ ಮೂಕಾಂಬಿಕಾ ದೇವಸ್ಥಾನಕ್ಕೆ ಕಳೆದ ವರ್ಷದ ಮಾರ್ಚ್, ಎಪ್ರಿಲ್ ಹಾಗೂ ಮೇ ತಿಂಗಳಲ್ಲಿ ಬಂದಿರುವ ಆದಾಯಕ್ಕೆ ಹೋಲಿಸಿದ್ದಲ್ಲಿ ಈ ಬಾರಿಯ ಆದಾಯದಲ್ಲಿ ಕಡಿಮೆಯಾಗಿರುವ ಬಗ್ಗೆ ದೇವಸ್ಥಾನದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.</p>.<p>2019 ನೇ ಮಾರ್ಚ್, ಏಪ್ರಿಲ್ ಹಾಗೂ ಮೇ ಮೂರು ತಿಂಗಳ ಅವಧಿಯಲ್ಲಿ ದೇವಸ್ಥಾನಕ್ಕೆ 13 ಕೋಟಿ ಆದಾಯ ಬಂದಿದ್ದು, ಇದೀಗ ದೇಶಾದ್ಯಾಂತ ಕೊವಿಡ್–19 ರ ಕಾರಣದಿಂದ ಲಾಕ್ ಡೌನ್ ಆಗಿರುವುದರಿಂದ ಈ ಮೂರು ತಿಂಗಳ ಅವಧಿಯಲ್ಲಿ ಅಂದಾಜು 14 ಕೋಟಿ ಆದಾಯ ಕಡಿಮೆಯಾಗಿದೆ ಎಂದು ದೇಗುಲದ ಕಾರ್ಯನಿರ್ವಹಣಾಧಿಕಾರಿಯವರ ಪ್ರಕಟಣೆಯಲ್ಲಿ ತಿಳಿಸಲಾಗಿದೆ.</p>.<p>ಕೊವಿಡ್ ಕಾರಣದಿಂದ ದೇವಸ್ಥಾನಗಳಿಗೆ ಪ್ರವೇಶ ನಿರ್ಬಂಧ ಇರುವುದರಿಂದ ಸೇವೆ ಮಾಡುವ ಭಕ್ತಾದಿಗಳು ಆನ್ಲೈನ್ ಮೂಲಕ ಸೇವೆಗಳಿಗೆ ಹಣ ಸಂದಾಯ ಮಾಡಬಹುದು.</p>.<p>ಸೇವೆ ಮಾಡಲು ಇಚ್ಚಿಸುವ ಭಕ್ತಾಧಿಗಳು ಕೊಲ್ಲೂರಿನ ಸಿಂಡಿಕೇಟ್ (ಕೆನರಾ) ಬ್ಯಾಂಕ್ನ ದೇವಸ್ಥಾನದ ಉಳಿತಾಯ ಖಾತೆ ಸಂಖ್ಯೆ 01752200000014 ( ಐಎಫ್ಸಿ ಸಂಖ್ಯೆ : ಎಸ್ವೈಎನ್ಬಿ 0000175) ಅಥವಾ ಕೊಲ್ಲೂರಿನ ವಿಜಯ ಬ್ಯಾಂಕ್ ( ಬ್ಯಾಂಕ್ ಆಫ್ ಬರೋಡಾ ) ಖಾತೆ ಸಂಖ್ಯೆ 142801011000001 ( ಐಎಫ್ಸಿ ಸಂಖ್ಯೆ : ವಿಐಜೆಬಿ0001428) ಗೆ ಹಣ ಸಂದಾಯ ಮಾಡಬಹುದು. ಹೆಚ್ಚಿನ ಮಾಹಿತಿಗಾಗಿ kollurmookambika.org ಮೂಲಕ ವಿವರ ಪಡೆದುಕೊಳ್ಳುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>