ಮುಂಜಾಗ್ರತಾ ಕ್ರಮ
ಸೋಮವಾರ ದೇವಸ್ಥಾನಗಳ ಮೇಲಿನ ನಿರ್ಭಂದ ಸಡಿಲು ಮಾಡಿದ ಪರಿಣಾಮ ಬ್ರಹ್ಮಾವರ ಪರಿಸರದ ಮಂದಾರ್ತಿ ದುರ್ಗಾಪರಮೇಶ್ವರಿ ದೇವಸ್ಥಾನ, ಕೋಟದ ಮಹಾಲಿಂಗೇಶ್ವರ ದೇವಸ್ಥಾನ, ಬಾರ್ಕೂರಿನ ಬಟ್ಟೆ ವಿನಾಯಕ ದೇವಸ್ಥಾನಗಳಲ್ಲಿ ಸಾಕಷ್ಟು ಮುಂಜಾಗ್ರತಾ ಕ್ರಮಗಳೊಂದಿಗೆ ಧಾರ್ಮಿಕ ಕಾರ್ಯಕ್ರಮಗಳನ್ನು ಮಾಡಲಾಯಿತು. ದೇವಸ್ಥಾನಗಳಲ್ಲಿ ಭಕ್ತರ ಸಂಖ್ಯೆ ಅಷ್ಟೇನೂ ಕಂಡು ಬಂದಿರಲಿಲ್ಲ. ಪೊಲೀಸ್ ಸಿಬ್ಬಂದಿ ನೇಮಿಸಿ ಮಾಸ್ಕ್, ಸ್ಯಾನಿಟೈಸರ್ ಬಳಸಿ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಕೇವಲ ಗಂಧಪ್ರಸಾದವನ್ನು ಮಾತ್ರ ಭಕ್ತರಿಗೆ ನೀಡಲಾಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.