ಸಮ್ಮೇಳನ ಸಂಘಟಿಸಲು ಸಮಿತಿ ರಚನೆ ಮಾಡಲಾಗಿದ್ದು, ಸಮಿತಿಯ ಗೌರವಾಧ್ಯಕ್ಷರನ್ನಾಗಿ ಗೋಕುಲದಾಸ್ ನಾಯಕ್, ಅಧ್ಯಕ್ಷರನ್ನಾಗಿ ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ.ಜಗದೀಶ್ ಪೈ, ಕಾರ್ಯಾಧ್ಯಕ್ಷರನ್ನಾಗಿ ಮಹೇಶ್ ಠಾಕೂರ್, ಅಮೃತ್ ಶೆಣೈ ಅವರನ್ನು ಪ್ರಧಾನ ಕಾರ್ಯದರ್ಶಿಯನ್ನಾಗಿ, ಪೂರ್ಣಿಮಾ ಸುರೇಶ್ ಅವರನ್ನು ಪ್ರಧಾನ ಸಂಚಾಲಕರನ್ನಾಗಿ, ಕುಯಿಲಾಡಿ ಸುರೇಶ್ ನಾಯಕ್ ಅವರನ್ನು ಗೌರವ ಸಲಹೆಗಾರರಾಗಿ ನೇಮಕ ಮಾಡಲಾಗಿದೆ ಎಂದು ವಿವರ ನೀಡಿದರು.