<p>ಉಡುಪಿ: ತಾಳಮದ್ದಲೆ ಅರ್ಥದಾರಿ ಹಾಗೂ ಚಿಂತಕ ಕೂರಾಡಿ ಸದಾಶಿವ ಕಲ್ಕೂರ (86) ಮಂಗಳವಾರ ರಾತ್ರಿ ಅಲೆವೂರಿನಲ್ಲಿ ನಿಧನರಾದರು.</p>.<p>ಮೃತರಿಗೆ ಮೂವರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ. ಯಕ್ಷಗಾನ ಹಾಗೂ ಸಾಮಾಜಿಕ ಸ್ಥಿತಿ–ಗತಿಗಳ ಕುರಿತು ‘ಬಿತ್ತಿದಂತೆ ಬೆಳೆ’ ಎಂಬ ಪುಸ್ತಕವನ್ನು ಪ್ರಕಟಿಸಿದ್ದಾರೆ. ಶಿವರಾಮ ಕಾರಂತ, ಬೈಕಾಡಿ ವೆಂಕಟಕೃಷ್ಣ ರಾವ್, ಗೋಪಾಲಕೃಷ್ಣ ಅಡಿಗರು ಸೇರಿದಂತೆ ಹಲವು ಸಾಹಿತಿಗಳೊಂದಿಗೆ ಸದಾಶಿವ ಕಲ್ಕೂರ ಒಡನಾಟ ಹೊಂದಿದ್ದರು.</p>.<p>ಕೂರಾಡಿಯಲ್ಲಿ ‘ಸಂಸ್ಕೃತಿ ಸಂಘ' ಕಟ್ಟಿ ಗ್ರಾಮೀಣ ಭಾಗಕ್ಕೆ ನಾಡಿನ ಶ್ರೇಷ್ಠ ಸಾಹಿತಿಗಳನ್ನು ಕರೆಸಿ ಅವರ ವಿಚಾರಧಾರೆಗಳನ್ನು ಜನರಿಗೆ ತಲುಪಿಸುವ ಕೆಲಸ ಮಾಡಿದ್ದರು. ತಾಳಮದ್ದಲೆಯ ಅರ್ಥಧಾರಿಯಾಗಿ ಕಲಾ ಸೇವೆ ಮಾಡಿದ ಸದಾಶಿವ ಕಲ್ಕೂರ ಅವರನ್ನು ಯಕ್ಷಗಾನ ಕಲಾರಂಗ, ಅಂಬಲಪಾಡಿ ಯಕ್ಷಗಾನ ಸಂಘ ಸೇರಿದಂತೆ ಹಲವಾರು ಸಂಸ್ಥೆಗಳು ಗೌರವಿಸಿದ್ದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಉಡುಪಿ: ತಾಳಮದ್ದಲೆ ಅರ್ಥದಾರಿ ಹಾಗೂ ಚಿಂತಕ ಕೂರಾಡಿ ಸದಾಶಿವ ಕಲ್ಕೂರ (86) ಮಂಗಳವಾರ ರಾತ್ರಿ ಅಲೆವೂರಿನಲ್ಲಿ ನಿಧನರಾದರು.</p>.<p>ಮೃತರಿಗೆ ಮೂವರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ. ಯಕ್ಷಗಾನ ಹಾಗೂ ಸಾಮಾಜಿಕ ಸ್ಥಿತಿ–ಗತಿಗಳ ಕುರಿತು ‘ಬಿತ್ತಿದಂತೆ ಬೆಳೆ’ ಎಂಬ ಪುಸ್ತಕವನ್ನು ಪ್ರಕಟಿಸಿದ್ದಾರೆ. ಶಿವರಾಮ ಕಾರಂತ, ಬೈಕಾಡಿ ವೆಂಕಟಕೃಷ್ಣ ರಾವ್, ಗೋಪಾಲಕೃಷ್ಣ ಅಡಿಗರು ಸೇರಿದಂತೆ ಹಲವು ಸಾಹಿತಿಗಳೊಂದಿಗೆ ಸದಾಶಿವ ಕಲ್ಕೂರ ಒಡನಾಟ ಹೊಂದಿದ್ದರು.</p>.<p>ಕೂರಾಡಿಯಲ್ಲಿ ‘ಸಂಸ್ಕೃತಿ ಸಂಘ' ಕಟ್ಟಿ ಗ್ರಾಮೀಣ ಭಾಗಕ್ಕೆ ನಾಡಿನ ಶ್ರೇಷ್ಠ ಸಾಹಿತಿಗಳನ್ನು ಕರೆಸಿ ಅವರ ವಿಚಾರಧಾರೆಗಳನ್ನು ಜನರಿಗೆ ತಲುಪಿಸುವ ಕೆಲಸ ಮಾಡಿದ್ದರು. ತಾಳಮದ್ದಲೆಯ ಅರ್ಥಧಾರಿಯಾಗಿ ಕಲಾ ಸೇವೆ ಮಾಡಿದ ಸದಾಶಿವ ಕಲ್ಕೂರ ಅವರನ್ನು ಯಕ್ಷಗಾನ ಕಲಾರಂಗ, ಅಂಬಲಪಾಡಿ ಯಕ್ಷಗಾನ ಸಂಘ ಸೇರಿದಂತೆ ಹಲವಾರು ಸಂಸ್ಥೆಗಳು ಗೌರವಿಸಿದ್ದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>