ಖಾಸಗಿ ಸಂಸ್ಥೆಯ ಸಹಭಾಗಿತ್ವದಲ್ಲಿ ನಡೆಯುತ್ತಿದ್ದ ಆಸ್ಪತ್ರೆಯನ್ನು ಸರ್ಕಾರ ಈಚೆಗೆ ವಶಕ್ಕೆ ಪಡೆದುಕೊಂಡಿತ್ತು. ಸರ್ಕಾರದ ಸುಪರ್ದಿಗೆ ಆಸ್ಪತ್ರೆ ಬರುವ ಮೊದಲು ಕಾರ್ಯನಿರ್ವಹಿಸಿದ್ದ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗೆ ಬಾಕಿ ವೇತನ, ಭತ್ಯೆ ಹಾಗೂ ಇತರ ವೆಚ್ಚಗಳನ್ನು ಭರಿಸಲು ₹ 3,68,71,724 ಅಗತ್ಯವಿದ್ದು ಮಂಜೂರು ಮಾಡುವಂತೆ ಜೂನ್ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಶಾಸಕ ಕೆ.ರಘುಪತಿ ಭಟ್ ಪ್ರಸ್ತಾವ ಸಲ್ಲಿಸಿದ್ದರು.