<p><strong>ಉಡುಪಿ:</strong> ಕೊರೊನಾ ಸೋಂಕು ಶಂಕೆ ಹಿನ್ನೆಲೆಯಲ್ಲಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮೂವರು ರೋಗಿಗಳು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಡಿಎಚ್ಒ ಸುಧೀರ್ ಚಂದ್ರ ಸೂಡಾ ತಿಳಿಸಿದ್ದಾರೆ.</p>.<p>ರೋಗಿಗಳು ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಕೊರೊನಾ ಸೋಂಕು ತಗುಲಿರುವ ಸಾಧ್ಯತೆಗಳು ಇಲ್ಲ. ಚೀನಾದಿಂದ ಬಂದಿದ್ದಾರೆ ಎಂಬ ಕಾರಣಕ್ಕೆ ರೋಗಿಗಳ ಕಫ ಹಾಗೂ ರಕ್ತದ ಮಾದರಿಯನ್ನು ಬೆಂಗಳೂರಿಗೆ ಕಳುಹಿಸಲಾಗಿದೆ. ಮೂರು ದಿನಗಳಲ್ಲಿ ವರದಿ ಬರಲಿದೆ ಎಂದರು.</p>.<p>ಸಾರ್ವಜನಿಕರು ಗಾಬರಿ ಪಡಬೇಕಿಲ್ಲ. ವದಂತಿಗಳಿಗೆ ಕಿವಿಗೊಡಬಾರದು. ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಜಿಲ್ಲಾ ಆಸ್ಪತ್ರೆಯಲ್ಲಿ 10 ಬೆಡ್ಗಳ ವ್ಯವಸ್ಥೆ ಇದೆ. ಅಗತ್ಯ ಮಾಸ್ಕ್ಗಳು ಇವೆ ಎಂದು ಡಿಎಚ್ಒ ತಿಳಿಸಿದ್ದಾರೆ.</p>.<p><strong>ಹಿನ್ನೆಲೆ</strong></p>.<p>ಒಂದೇ ಕುಟುಂಬದ ಮೂವರು 15 ದಿನಗಳ ಹಿಂದೆ ಚೀನಾ ಪ್ರವಾಸ ಮುಗಿಸಿ ಉಡುಪಿಗೆ ಬಂದಿದ್ದರು. ಈ ವೇಳೆ ಅವರಿಗೆ ಶೀತ, ಗಂಟಲು ಸೋಂಕು ಕಾಣಿಸಿಕೊಂಡು ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ಕೊರೊನಾ ಸೋಂಕು ಶಂಕೆ ಹಿನ್ನೆಲೆಯಲ್ಲಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮೂವರು ರೋಗಿಗಳು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಡಿಎಚ್ಒ ಸುಧೀರ್ ಚಂದ್ರ ಸೂಡಾ ತಿಳಿಸಿದ್ದಾರೆ.</p>.<p>ರೋಗಿಗಳು ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಕೊರೊನಾ ಸೋಂಕು ತಗುಲಿರುವ ಸಾಧ್ಯತೆಗಳು ಇಲ್ಲ. ಚೀನಾದಿಂದ ಬಂದಿದ್ದಾರೆ ಎಂಬ ಕಾರಣಕ್ಕೆ ರೋಗಿಗಳ ಕಫ ಹಾಗೂ ರಕ್ತದ ಮಾದರಿಯನ್ನು ಬೆಂಗಳೂರಿಗೆ ಕಳುಹಿಸಲಾಗಿದೆ. ಮೂರು ದಿನಗಳಲ್ಲಿ ವರದಿ ಬರಲಿದೆ ಎಂದರು.</p>.<p>ಸಾರ್ವಜನಿಕರು ಗಾಬರಿ ಪಡಬೇಕಿಲ್ಲ. ವದಂತಿಗಳಿಗೆ ಕಿವಿಗೊಡಬಾರದು. ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಜಿಲ್ಲಾ ಆಸ್ಪತ್ರೆಯಲ್ಲಿ 10 ಬೆಡ್ಗಳ ವ್ಯವಸ್ಥೆ ಇದೆ. ಅಗತ್ಯ ಮಾಸ್ಕ್ಗಳು ಇವೆ ಎಂದು ಡಿಎಚ್ಒ ತಿಳಿಸಿದ್ದಾರೆ.</p>.<p><strong>ಹಿನ್ನೆಲೆ</strong></p>.<p>ಒಂದೇ ಕುಟುಂಬದ ಮೂವರು 15 ದಿನಗಳ ಹಿಂದೆ ಚೀನಾ ಪ್ರವಾಸ ಮುಗಿಸಿ ಉಡುಪಿಗೆ ಬಂದಿದ್ದರು. ಈ ವೇಳೆ ಅವರಿಗೆ ಶೀತ, ಗಂಟಲು ಸೋಂಕು ಕಾಣಿಸಿಕೊಂಡು ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>