‘ರಾಜ್ಯದಲ್ಲಿ ಅಭಿವೃದ್ಧಿಗೆ ಸಾಕಷ್ಟು ಅವಕಾಶವಿರುವ ಜಿಲ್ಲೆಗಳಲ್ಲಿ ಬೆಂಗಳೂರು ಮೊದಲ ಸ್ಥಾನದಲ್ಲಿದೆ. ನಂತರದ ಸ್ಥಾನ ದಕ್ಷಿಣ ಕನ್ನಡಕ್ಕೆ ಇದೆ. ಇಲ್ಲಿ 250 ಗ್ರಾಮ ಪಂಚಾಯಿತಿಗಳಿದ್ದು, ನಮ್ಮದೇ ಪಕ್ಷದ 7 ಮಂದಿ ಶಾಸಕರು, ಸಂಸದರಿದ್ದಾರೆ. ಜತೆಗೆ ನಮ್ಮ ಪಕ್ಷದ ರಾಜಾಧ್ಯಕ್ಷರು ಇಲ್ಲಿನವರೇ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯ ದೇಗುಲಗಳಿದ್ದು ನಾನು ಮುಜರಾಯಿ ಸಚಿವನಾಗಿರುವುದರಿಂದ ಇವುಗಳ ಅಭಿವೃದ್ಧಿಗೆ ಒತ್ತು ನೀಡುವುದರ ಜತೆಗೆ ಇಲ್ಲಿನ ಕಿರುಬಂದರು, ಬೃಹತ್ ಬಂದರುಗಳಿದ್ದು ಅವುಗಳನ್ನು ಅಭಿವೃದ್ಧಿ ಮಾಡುತ್ತೇನೆ. ಮೀನುಗಾರಿಕೆಯ ಅಭಿವೃದ್ಧಿಯ ಸಲುವಾಗಿ ಕೆಲಸ ಮಾಡುತ್ತೇನೆ. ಒಳನಾಡು ಜಲಸಾರಿಗೆ ಇಲಾಖೆಯ ಮೂಲಕ ಈ ಭಾಗದಲ್ಲಿ ಬೋಟ್ಹೌಸ್ಗಳ ನಿರ್ಮಾಣಕ್ಕೆ ಒತ್ತು ನೀಡುವುದರ ಜತೆಗೆ ದಕ್ಷಿಣ ಕನ್ನಡ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಒತ್ತು ನೀಡುತ್ತೇನೆ’ ಎಂದರು.