ಉದ್ಯಮಿ ಕರುಣಾಕರ ಕಾಂಚನ್ ಹೊಸ ಸದಸ್ಯರಾಗಿ ಸೇರ್ಪಡೆಗೊಂಡರು. ವಲಯ ಸೇನಾನಿ ಗಂಗಾಧರ ಉಡುಪ ಕ್ಲಬ್ನ ಮುಖವಾಣಿ ದಿಕ್ಸೂಚಿಯನ್ನು ಬಿಡುಗಡೆಗೊಳಿಸಿದರು. ಸಾಲಿಗ್ರಾಮ ಕಾರ್ಕಡ ಪ್ರಾಥಮಿಕ ಆರೋಗ್ಯ ಕೇಂದ್ರದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ಮಿನ್ನು ಎ.ಸಿ ಹಾಗೂ ಕೋಟದ ಮೆಸ್ಕಾಂ ಶಾಖೆಯಲ್ಲಿ ಜ್ಯೂನಿಯರ್ ಪವರ್ ಮ್ಯಾನ್ ರಮೇಶ ಮೇಳೆದ ಅವರನ್ನು ಗೌರವಿಸಲಾಯಿತು. ನಿರ್ಗಮಿತ ಅಧ್ಯಕ್ಷ ವಿಷ್ಣುಮೂರ್ತಿ ಉರಾಳ ಸ್ವಾಗತಿಸಿದರು. ಜತೆ ಕಾರ್ಯದರ್ಶಿ ಸತೀಶ ಪೂಜಾರಿ ವಂದಿಸಿದರು. ಶಾನಾಡಿ ಉದಯ ಕುಮಾರ್ ಹೆಗ್ಡೆ ಕಾರ್ಯಕ್ರಮ ನಿರೂಪಿಸಿದರು.