ಉಡುಪಿ: ಪಠ್ಯ ಪರಿಷ್ಕರಣೆ ಸಂಬಂಧ ವಿರೋಧ ಪಕ್ಷಗಳ ಟೀಕೆ, ಟಿಪ್ಪಣಿಗಳಿಗೆ ಸರ್ಕಾರ ಉತ್ತರಿಸುತ್ತಿರುವ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪಠ್ಯಪುಸ್ತಕ ಹರಿದು ಹಾಕಿರುವುದು ಆತಂಕಕಾರಿ ಎಂದು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಭಿಪ್ರಾಯಪಟ್ಟರು.