ಯಕ್ಷಗಾನ ವಿಮರ್ಶಕ ಪ್ರೊ.ಎಸ್.ವಿ. ಉದಯ ಕುಮಾರ ಶೆಟ್ಟಿ ಅಭಿನಂದನಾ ಭಾಷಣ ಮಾಡಿದರು. ಹೊಸನಗರ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಶ್ರೀಧರ ಶೆಟ್ಟಿ ಅಡಗೋಡಿ, ವಾಹಿನಿ ಯುವಕ ಮಂಡಲದ ಅಧ್ಯಕ್ಷ ರಮೇಶ ಎಚ್. ಕುಂದರ್, ಮನೋವೈದ್ಯ ಡಾ.ಪ್ರಕಾಶ್ ಸಿ.ತೋಳಾರ್, ಪಂಚವರ್ಣ ಯುವಕ ಮಂಡಲದ ಸ್ಥಾಪಕಾಧ್ಯಕ್ಷ ಸುರೇಶ ಗಾಣಿಗ, ಗೋವಿಗಾಗಿ ಮೇವು ಸ್ಥಾಪಕಾಧ್ಯಕ್ಷ ಪ್ರಥ್ವಿರಾಜ್ ಶೆಟ್ಟಿ, ಸ್ಥಳೀಯ ಮುಖಂಡ ದಾರೋಜಿ ಆನಂದ್ ಕಾಂಚನ್, ಪಡುಕರೆ ಸಂಯುಕ್ತ ಪ್ರೌಢಶಾಲಾ ಪ್ರಾಥಮಿಕ ವಿಭಾಗದ ಎಸ್ಡಿಎಂಸಿ ಅಧ್ಯಕ್ಷ ನಾಗರಾಜ, ಕಲಾ ಬಳಗದ ನಿಕಟಪೂರ್ವ ಅಧ್ಯಕ್ಷ ಸಂತೋಷ ತಿಂಗಳಾಯ, ಉದ್ಯಮಿ ಬಿಜು ನಾಯರ್, ಸಾಮಾಜಿಕ ಕಾರ್ಯಕರ್ತ ಶ್ರೀಕಾಂತ ಶೆಣೈ ಕೋಟ ಇದ್ದರು. ಕಲಾಬಳಗ ಸದಸ್ಯ ಪ್ರಭಾಕರ ಮಣೂರು ಸ್ವಾಗತಿಸಿದರು. ಪತ್ರಕರ್ತ ರವೀಂದ್ರ ಕೋಟ ವಂದಿಸಿದರು. ಸಂತೋಷ ಕುಮಾರ್ ಕೋಟ, ಸುಜಾತ ಬಾಯರಿ ನಿರೂಪಿಸಿದರು.