<p><strong>ಕೋಟ</strong> (ಬ್ರಹ್ಮಾವರ): ಓರ್ವ ಕಲಾವಿದನ ಬದುಕು ರಂಗಸ್ಥಳದಲ್ಲಿಯೇ ಗುರುತಿಸುವಂತಾಗಬೇಕು. ಕಲೆಯ ಮೇಲಿನ ಶ್ರದ್ಧೆ ಅವರ ಬದುಕಿಗೆ ದಾರಿ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.</p>.<p>ಇಲ್ಲಿನ ಕಾರಂತ ಥೀಂ ಪಾರ್ಕ್ನಲ್ಲಿ ಭಾನುವಾರ ಯಕ್ಷಗಾನ ಕಲಾವಿದ ಮಾಧವ ನಾಗೂರು ಅಭಿನಂದನಾ ಸಮಿತಿ ವತಿಯಿಂದ ಮಾಧವ ನಾಗೂರು ಅವರ ಯಕ್ಷಯಾನದ ರಜತ ಸಂಭ್ರಮ ನಾಗೂರು ಬೆಳ್ಳಿಪಥ ಅಭಿನಂದನೆ, ಗುರುವಂದನೆ, ನಿಧಿ ಸಮರ್ಪಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಯಕ್ಷಗಾನದಲ್ಲಿ ಬೆಳೆದು ಬರಲು ಶಕ್ತಿ ತುಂಬಲು ಪ್ರೇರಣೆ, ಪ್ರೋತ್ಸಾಹಿಸುವುದರ ಜತೆಗೆ ಗುರುತಿಸುವ ಕೆಲಸ ಮಾಡುವುದು ಒಳ್ಳೆಯ ಕೆಲಸ. ಯಕ್ಷಗಾನ ಕಲಾವಿದರ ಬದುಕು ರೂಪಿಸುವ ಕೆಲಸವಾಗಬೇಕು. ಈ ಬಗ್ಗೆ ಸರ್ಕಾರದ ನೆಲೆಯಲ್ಲಿ ಹೆಚ್ಚಿನ ಕೆಲಸವಾಗಬೇಕು. ಕಲಾವಿದನಿಗೆ ಸರ್ಕಾರ ನೀಡುವ ಪ್ರಶಸ್ತಿಗಳಿಗಿಂತಲೂ ಅಭಿಮಾನಿಗಳು ನೀಡುವ ಪ್ರಶಸ್ತಿಯೇ ದೊಡ್ಡದು ಎಂದು ಅವರು ಹೇಳಿದರು.</p>.<p>ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, 80ರ ಇಳಿ ವಯಸ್ಸಿನಲ್ಲಿಯೂ ಜಗತ್ತು ಮೆಚ್ಚುವಂತಹ ಪಾತ್ರ ಮಾಡಿ ಅಭಿಮಾನಿಗಳಿಂದ ಮೆಚ್ಚಿಸಿಕೊಳ್ಳುವಂತಹ ಶಕ್ತಿ ಯಕ್ಷಗಾನಕ್ಕೆ ಮಾತ್ರ ಇದೆ ಎಂದರು.</p>.<p>ಯಕ್ಷಗಾನ ಕಲಾವಿದ ದಯಾನಂದ ಬಳೆಗಾರ ನಾಗೂರು ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮಾಧವ ನಾಗೂರು ಅಭಿನಂದನಾ ಸಮಿತಿ ಅಧ್ಯಕ್ಷ ಆನಂದ ಸಿ. ಕುಂದರ್ ಅಧ್ಯಕ್ಷತೆ ವಹಿಸಿದ್ದರು.</p>.<p>ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ರಾಜೇಶ್ ಕಾರಂತ, ಉದ್ಯಮಿಗಳಾದ ಶ್ರೀನಿವಾಸ ಜೋಗಿ, ದಿನೇಶ ಹೆಗ್ಡೆ ಮೊಳಹಳ್ಳಿ, ಗಣೇಶ ಪ್ರಸಾದ ಕಾಂಚನ್, ಭಾಗವರ ರಾಘವೇಂದ್ರ ಮಯ್ಯ ಹಾಲಾಡಿ, ಜೋಗಿ ಸಮಾಜ ಸೇವಾ ಸಂಘದ ರಮೇಶ ಜೋಗಿ, ಕೋಟತಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷ ಸತೀಶ ಬಾರಿಕೆರೆ ಭಾಗವಹಿಸಿದ್ದರು. ಯಕ್ಷಗಾನ ಪ್ರಸಂಗಕರ್ತ ಬೇಳೂರು ವಿಷ್ಣುಮೂರ್ತಿ ನಾಯಕ್ ಅಭಿನಂದನಾ ನುಡಿಗಳನ್ನಾಡಿದರು.</p>.<p>ಮಾಧವ ನಾಗೂರು ಅವರ ಯಕ್ಷಗುರುಗಳಾದ ದಯಾನಂದ ಬಳೆಗಾರ ನಾಗೂರು, ಆರ್ಗೋಡು ಮೋಹನದಾಸ ಶೆಣೈ, ಮೊಳಹಳ್ಳ ಕೃಷ್ಣ ನಾಯಕ್ ಅವರಿಗೆ ಗುರುವಂದನೆ ಸಲ್ಲಿಸಲಾಯಿತು. ಅಭಿನಂದನಾ ಸಮಿತಿ ವತಿಯಿಂದ ಯಕ್ಷ ಯಾನದ ರಜತ ಸಂಭ್ರಮ ಆಚರಿಸಿಕೊಳ್ಳುತ್ತಿರುವ ಸ್ತ್ರೀ ವೇಷಧಾರಿ ಮಾಧವ ನಾಗೂರು ದಂಪತಿಯನ್ನು ಗೌರವಿಸಲಾಯಿತು. ವಿವಿಧ ಸಂಘ ಸಂಸ್ಥೆಗಳು, ಯಕ್ಷಗಾನ ಕಲಾವಿದರಿಂದ ನಿಧಿ ಸಮರ್ಪಣಾ ಕಾರ್ಯಕ್ರಮ ನಡೆಯಿತು.</p>.<p>ಅಮೃತೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಗಣೇಶ ನೆಲ್ಲಿಬೆಟ್ಟು ಸ್ವಾಗತಿಸಿದರು. ಕಾರಂತ ಥೀಂ ಪಾರ್ಕ್ ಟ್ರಸ್ಟಿ ಚಂದ್ರ ಆಚಾರ್ ವಂದಿಸಿದರು. ಶಿಕ್ಷಕ ಸಂತೋಷ ಕುಮಾರ್ ಪಡುಕರೆ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಟ</strong> (ಬ್ರಹ್ಮಾವರ): ಓರ್ವ ಕಲಾವಿದನ ಬದುಕು ರಂಗಸ್ಥಳದಲ್ಲಿಯೇ ಗುರುತಿಸುವಂತಾಗಬೇಕು. ಕಲೆಯ ಮೇಲಿನ ಶ್ರದ್ಧೆ ಅವರ ಬದುಕಿಗೆ ದಾರಿ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.</p>.<p>ಇಲ್ಲಿನ ಕಾರಂತ ಥೀಂ ಪಾರ್ಕ್ನಲ್ಲಿ ಭಾನುವಾರ ಯಕ್ಷಗಾನ ಕಲಾವಿದ ಮಾಧವ ನಾಗೂರು ಅಭಿನಂದನಾ ಸಮಿತಿ ವತಿಯಿಂದ ಮಾಧವ ನಾಗೂರು ಅವರ ಯಕ್ಷಯಾನದ ರಜತ ಸಂಭ್ರಮ ನಾಗೂರು ಬೆಳ್ಳಿಪಥ ಅಭಿನಂದನೆ, ಗುರುವಂದನೆ, ನಿಧಿ ಸಮರ್ಪಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಯಕ್ಷಗಾನದಲ್ಲಿ ಬೆಳೆದು ಬರಲು ಶಕ್ತಿ ತುಂಬಲು ಪ್ರೇರಣೆ, ಪ್ರೋತ್ಸಾಹಿಸುವುದರ ಜತೆಗೆ ಗುರುತಿಸುವ ಕೆಲಸ ಮಾಡುವುದು ಒಳ್ಳೆಯ ಕೆಲಸ. ಯಕ್ಷಗಾನ ಕಲಾವಿದರ ಬದುಕು ರೂಪಿಸುವ ಕೆಲಸವಾಗಬೇಕು. ಈ ಬಗ್ಗೆ ಸರ್ಕಾರದ ನೆಲೆಯಲ್ಲಿ ಹೆಚ್ಚಿನ ಕೆಲಸವಾಗಬೇಕು. ಕಲಾವಿದನಿಗೆ ಸರ್ಕಾರ ನೀಡುವ ಪ್ರಶಸ್ತಿಗಳಿಗಿಂತಲೂ ಅಭಿಮಾನಿಗಳು ನೀಡುವ ಪ್ರಶಸ್ತಿಯೇ ದೊಡ್ಡದು ಎಂದು ಅವರು ಹೇಳಿದರು.</p>.<p>ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, 80ರ ಇಳಿ ವಯಸ್ಸಿನಲ್ಲಿಯೂ ಜಗತ್ತು ಮೆಚ್ಚುವಂತಹ ಪಾತ್ರ ಮಾಡಿ ಅಭಿಮಾನಿಗಳಿಂದ ಮೆಚ್ಚಿಸಿಕೊಳ್ಳುವಂತಹ ಶಕ್ತಿ ಯಕ್ಷಗಾನಕ್ಕೆ ಮಾತ್ರ ಇದೆ ಎಂದರು.</p>.<p>ಯಕ್ಷಗಾನ ಕಲಾವಿದ ದಯಾನಂದ ಬಳೆಗಾರ ನಾಗೂರು ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮಾಧವ ನಾಗೂರು ಅಭಿನಂದನಾ ಸಮಿತಿ ಅಧ್ಯಕ್ಷ ಆನಂದ ಸಿ. ಕುಂದರ್ ಅಧ್ಯಕ್ಷತೆ ವಹಿಸಿದ್ದರು.</p>.<p>ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ರಾಜೇಶ್ ಕಾರಂತ, ಉದ್ಯಮಿಗಳಾದ ಶ್ರೀನಿವಾಸ ಜೋಗಿ, ದಿನೇಶ ಹೆಗ್ಡೆ ಮೊಳಹಳ್ಳಿ, ಗಣೇಶ ಪ್ರಸಾದ ಕಾಂಚನ್, ಭಾಗವರ ರಾಘವೇಂದ್ರ ಮಯ್ಯ ಹಾಲಾಡಿ, ಜೋಗಿ ಸಮಾಜ ಸೇವಾ ಸಂಘದ ರಮೇಶ ಜೋಗಿ, ಕೋಟತಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷ ಸತೀಶ ಬಾರಿಕೆರೆ ಭಾಗವಹಿಸಿದ್ದರು. ಯಕ್ಷಗಾನ ಪ್ರಸಂಗಕರ್ತ ಬೇಳೂರು ವಿಷ್ಣುಮೂರ್ತಿ ನಾಯಕ್ ಅಭಿನಂದನಾ ನುಡಿಗಳನ್ನಾಡಿದರು.</p>.<p>ಮಾಧವ ನಾಗೂರು ಅವರ ಯಕ್ಷಗುರುಗಳಾದ ದಯಾನಂದ ಬಳೆಗಾರ ನಾಗೂರು, ಆರ್ಗೋಡು ಮೋಹನದಾಸ ಶೆಣೈ, ಮೊಳಹಳ್ಳ ಕೃಷ್ಣ ನಾಯಕ್ ಅವರಿಗೆ ಗುರುವಂದನೆ ಸಲ್ಲಿಸಲಾಯಿತು. ಅಭಿನಂದನಾ ಸಮಿತಿ ವತಿಯಿಂದ ಯಕ್ಷ ಯಾನದ ರಜತ ಸಂಭ್ರಮ ಆಚರಿಸಿಕೊಳ್ಳುತ್ತಿರುವ ಸ್ತ್ರೀ ವೇಷಧಾರಿ ಮಾಧವ ನಾಗೂರು ದಂಪತಿಯನ್ನು ಗೌರವಿಸಲಾಯಿತು. ವಿವಿಧ ಸಂಘ ಸಂಸ್ಥೆಗಳು, ಯಕ್ಷಗಾನ ಕಲಾವಿದರಿಂದ ನಿಧಿ ಸಮರ್ಪಣಾ ಕಾರ್ಯಕ್ರಮ ನಡೆಯಿತು.</p>.<p>ಅಮೃತೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಗಣೇಶ ನೆಲ್ಲಿಬೆಟ್ಟು ಸ್ವಾಗತಿಸಿದರು. ಕಾರಂತ ಥೀಂ ಪಾರ್ಕ್ ಟ್ರಸ್ಟಿ ಚಂದ್ರ ಆಚಾರ್ ವಂದಿಸಿದರು. ಶಿಕ್ಷಕ ಸಂತೋಷ ಕುಮಾರ್ ಪಡುಕರೆ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>