ಭಾರಿ ಗಾತ್ರದ ಕಲ್ಲುಗಳು ಸಮುದ್ರ ಸೇರುತ್ತಿವೆ. ಈ ಬಗ್ಗೆ ಸ್ಥಳೀಯರು ಆತಂಕ ವ್ಯಕ್ತಪಡಿಸುತ್ತಿದ್ದು, ಸಮುದ್ರದ ತೆರೆಗಳು ಕಲ್ಲುಗಳಿಗೆ ಬಡಿದು ಮೇಲಕ್ಕೆ ಅಪ್ಪಳಿಸುತ್ತಿವೆ. ರಸ್ತೆ ಸಂಪರ್ಕ ಕಡಿತವಾದರೆ ನೂರಾರು ಮನೆಗಳಿಗೆ ರಸ್ತೆ ಸಂಪರ್ಕ ಕಡಿದುಕೊಳ್ಳಲಿದೆ. ತಕ್ಷಣ ಸೂಕ್ತ ಕ್ರಮಕೈಗೊಳ್ಳುವಂತೆ ವಿವಿಧ ಇಲಾಖೆಗೆ ಸ್ಥಳೀಯಾಡಳಿತದ ಪ್ರತಿನಿಧಿಗಳಾದ ವಿಜಯ ಕುಂದರ್, ಭುಜಂಗ ಗುರಿಕಾರ ಮತ್ತು ಗ್ರಾಮಸ್ಥರು ಆಗ್ರಹಿಸಿದ್ದಾರೆ.