2007ರಿಂದ ಇಲ್ಲಿಯವರೆಗೂ ಬೈಂದೂರು ಕ್ಷೇತ್ರದಿಂದ ನಾಲ್ಕು ಬಾರಿ ವಿಧಾನ ಪರಿಷತ್ ಸದಸ್ಯನಾಗಿ ಆಯ್ಕೆಯಾಗಿದ್ದಾನೆ. ಹಾಗಾಗಿ, ಕ್ಷೇತ್ರಕ್ಕೆ ಭೇಟಿನೀಡುವುದು ಸಹಜ. ಇದೇ ಕಾರಣಕ್ಕೆ ಬೈಂದೂರಿನಿಂದ ಸ್ಪರ್ಧಿಸುತ್ತೇನೆ ಎಂಬ ಅಭಿಪ್ರಾಯಗಳು ವ್ಯಕ್ತವಾಗಿವೆ. ಮೇಲ್ಮನೆ (ವಿಧಾನ ಪರಿಷತ್) ಚಿಂತಕರ ಚಾವಡಿಯಾಗಿದ್ದು, ಹಿರಿಯರು, ಮೇಧಾವಿಗಳು ಇದ್ದಾರೆ. ಇಂತಹ ಸಧನದಲ್ಲಿ ಪ್ರತಿಪಕ್ಷ ನಾಯಕನಾಗಿ, ಮೂರು ಬಾರಿ ಸಚಿವನಾಗಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಮುಂದೆಯೂ ವಿಧಾನ ಪರಿಷತ್ನಲ್ಲಿಯೇ ಮುಂದುವರಿಯಬೇಕು ಎಂಬುದು ವೈಯಕ್ತಿಕ ಅಪೇಕ್ಷೆ. ಅಂತಿಮವಾಗಿ ಪಕ್ಷದ ತೀರ್ಮಾನಕ್ಕೆ ಬದ್ಧ ಎಂದರು.