ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾದಯಾತ್ರೆಯ ಹರಕೆ

ಕೋಟ ಶ್ರೀನಿವಾಸ ಪೂಜಾರಿ ಅಭಿಮಾನಿಗಳು
Last Updated 6 ಆಗಸ್ಟ್ 2021, 4:27 IST
ಅಕ್ಷರ ಗಾತ್ರ

ಕುಂದಾಪುರ: ರಾಜ್ಯ ಸರ್ಕಾರದ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಅವರ ಅಭಿಮಾನಿಗಳು ಹಾಗೂ ಆಪ್ತರು ಕೋಟದಿಂದ ಮಾರಣಕಟ್ಟೆಗೆ ವರೆಗೆ ಪಾದಯಾತ್ರೆ ಮಾಡಿ ಹರಕೆ ತೀರಿಸಿದರು.

ಗುರುವಾರ ಬೆಳಿಗ್ಗೆ ಕೋಟ ಅಮೃತೇಶ್ವರಿ ದೇವಸ್ಥಾನದಿಂದ ಹೊರಟು ಮಾರಣಕಟ್ಟೆ ಬ್ರಹ್ಮಲಿಂಗೇಶ್ವರ ದೇವಸ್ಥಾನದವರೆಗೆ ಪಾದಯಾತ್ರೆ ನಡೆಸಿದ ಅಭಿಮಾನಿಗಳು ದೇವರಿಗೆ ಪೂಜೆ ಸಲ್ಲಿಸಿದರು.

ಸಚಿವ ಕೋಟ ಅವರ ಆಪ್ತ ಸಹಾಯಕ ಹರೀಶಕುಮಾರ್ ಶೆಟ್ಟಿ, ರಂಜಿತ್ ಪೂಜಾರಿ, ಅಭಿಮಾನಿಗಳಾದ ಪ್ರಸಾದ್ ಬಿಲ್ಲವ, ಸುದಿನ ಕೋಡಿ, ರಾಮಕೃಷ್ಣ ಶೆಟ್ಟಿ ಗುಡ್ರಿ, ಸಂದೀಪ್ ಕೊಲ್ಲೂರು, ಶೇಖರ್ ಪೂಜಾರಿ ಗೋಳಿಹೊಳೆ, ಮಹೇಶ್ ಹಟ್ಟಿಕುದ್ರು, ಸಾಯಿಕುಮಾರ್, ನಾಗರಾಜ್ ಗೋಳಿಹೊಳೆ, ಸೀತಾರಾಮ್, ಸೂರಜ್ ಶೆಟ್ಟಿ , ಕೊಲ್ಲೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಶಿವರಾಮಕೃಷ್ಣ ಭಟ್ ಇದ್ದರು.

‘ಶ್ರೀನಿವಾಸ ಪೂಜಾರಿ ಮುಜರಾಯಿ ಸಚಿವರಾಗಿದ್ದಾಗ ದೇವಸ್ಥಾನ ಹಾಗೂ ಮಠ–ಮಂದಿರಗಳ ಅಭಿವೃದ್ಧಿಗೆ ವಿಶೇಷ ಅನುದಾನ ನೀಡಿದ್ದರು. ಅವರು ಪುನಃ ಸಚಿವರಾದರೆ, ಕೋಟದಿಂದ ಮಾರಣಕಟ್ಟೆ ದೇವಸ್ಥಾನಕ್ಕೆ‌ ಪಾದಯಾತ್ರೆ ಮಾಡಿ ದೇವರಿಗೆ ಪೂಜೆ ಸಲ್ಲಿಸುತ್ತೇವೆ ಎಂದು ಹರಕೆ ಹೊತ್ತು, ಈಗ ಅದನ್ನು ಸಮರ್ಪಿಸಿದ್ದೇವೆ’ ಎಂದು ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT