ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಾಲಾಜಿಗೆ ನಿಗಮ ಮಂಡಳಿ ಸ್ಧಾನ: ಕೋಟ ಶ್ರೀನಿವಾಸ ಪೂಜಾರಿ

Last Updated 31 ಜುಲೈ 2020, 14:50 IST
ಅಕ್ಷರ ಗಾತ್ರ

ಕಾಪು: ಶಾಸಕ ಲಾಲಾಜಿ ಮೆಂಡನ್ ಅವರಿಗೆ ನಿಗಮ ಮಂಡಳಿ ಸ್ಥಾನ ನೀಡುವ ವಿಚಾರದಲ್ಲಿ ಗೊಂದಲವಿಲ್ಲ. ಕಾನೂನಿನ ನಿಯಮದಲ್ಲಿ ಬದಲಾವಣೆ ತಂದು ಬೇರೆ ನಿಗಮ ಕೊಡಲಾಗುವುದು ಎಂದು ಮೀನುಗಾರಿಕಾ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಕಾಪುವಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ,ಮುಖ್ಯಮಂತ್ರಿ ಯಡಿಯೂರಪ್ಪ ಅವರ ಆಪ್ತರಾದ ಲಾಲಾಜಿ ಮೆಂಡನ್ ಅವರಿಗೆ ಸ್ಥಾನ ಸಿಗುವುದು ಖಚಿತ ಎಂದರು.

ಸರ್ಕಾರ ಸುಭದ್ರ:ಸರ್ಕಾರ ಸುಭದ್ರವಾಗಿದೆ. ಸ್ಥಿರ ಸರ್ಕಾರ ಇರಲಿದೆ. ಮುಂದಿನ ಮೂರು ವರ್ಷ ಮುಖ್ಯಮಂತ್ರಿ ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ. ಅವರ ನಿರ್ದೇಶನದಲ್ಲಿ ಕೆಲಸ ಮಾಡುತ್ತೇವೆ ಎಂದು ಕೋಟ ಹೇಳಿದರು.

ಜಿಲ್ಲಾಧಿಕಾರಿ ವರ್ಗಾವಣೆ ಕಾಲಕಾಲಕ್ಕೆ ನಡೆಯುತ್ತದೆ. ಇದರಲ್ಲಿ ರಾಜಕಾರಣ ಇಲ್ಲ.ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಸಿಂಧೂ ರೂಪೇಶ್ ಅವರ ವರ್ಗಾವಣೆಶಿಕ್ಷೆಯಲ್ಲ. ಸಹಜ ಪ್ರಕ್ರಿಯೆ, ಗೊಂದಲ ಬೇಡ. ರಾಜ್ಯದಲ್ಲಿ 13 ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಲಾಗಿದೆ. ವರ್ಗಾವಣೆ ಬಗ್ಗೆ ಆರೋಪ ಮಾಡುವ ಮುನ್ನ ಖಾದರ್ ಅವರು ಅರಿತು ಮಾತನಾಡಬೇಕು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT