ಬಸವರಾಜ ಬೊಮ್ಮಾಯಿ ಸಚಿವ ಸಂಪುಟದಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಮೂವರಿಗೆ ಸಚಿವ ಸ್ಥಾನ ಸಿಕ್ಕಿದ್ದು, ಮೂವರು ಒಟ್ಟಾಗಿ ಜನರ ಸಮಸ್ಯೆಗೆ ಸ್ಪಂದಿಸುತ್ತೇವೆ. ಪಾರದರ್ಶಕ, ಜನಪರ ಮತ್ತು ಕ್ರಿಯಾಶೀಲ ಆಡಳಿತ ನೀಡುವುದು ಗುರಿ. ಯಾರು ಯಾವ ಖಾತೆ ನಿಭಾಯಿಸಬಲ್ಲರು ಎಂದು ನಿರ್ಧರಿಸಿ ಮುಖ್ಯಮಂತ್ರಿ ಖಾತೆ ಹಂಚಿಕೆ ಮಾಡಲಿದ್ದು, ಸಿಗುವ ಖಾತೆಯಲ್ಲಿ ಜನಪರ ಕೆಲಸ ಮಾಡುತ್ತೇನೆ ಎಂದರು