ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಲ್ಲ ದೇಗುಲಗಳಲ್ಲಿ ಪೂಜೆ ಪ್ರಾರ್ಥನೆ: ಕೋಟ

ಇಂದು ರಾಮಮಂದಿರ ಶೀಲಾನ್ಯಾಸ ಕಾರ್ಯಕ್ರಮ
Last Updated 4 ಆಗಸ್ಟ್ 2020, 12:02 IST
ಅಕ್ಷರ ಗಾತ್ರ

ಉಡುಪಿ: ಆ.5ರಂದು ಅಯೋಧ್ಯೆಯ ರಾಮಜನ್ಮಭೂಮಿಯಲ್ಲಿ ರಾಮಮಂದಿರ ಶಿಲಾನ್ಯಾಸ ಕಾರ್ಯಕ್ರಮ ಜರುಗಲಿದ್ದು, ಅಂದು ರಾಜ್ಯದ ಎಲ್ಲ ಖಾಸಗಿ ಹಾಗೂ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ದೇವಸ್ಥಾನಗಳಲ್ಲಿ ಪೂಜೆ ಹಾಗೂ ಪ್ರಾರ್ಥನೆ ನಡೆಸುವಂತೆ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮನವಿ ಮಾಡಿದ್ದಾರೆ.‌

ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರ ಸೂಚನೆಯಂತೆ ದೇವಸ್ಥಾನಗಳಲ್ಲಿ ಅರ್ಚಕರು ರಾಮಮಂದಿರ ನಿರ್ಮಾಣ ಕಾರ್ಯನಿರ್ವಿಘ್ನವಾಗಿ ನಡೆಯುವಂತೆ ದೇವರಿಗೆ ಪೂಜೆ, ಪ್ರಾರ್ಥನೆ ಸಲ್ಲಿಸಬೇಕು. ಸಾರ್ವಜನಿಕರು ಕೂಡ ಮನೆಯಲ್ಲಿ ಪ್ರಾರ್ಥನೆ ಮಾಡುವಂತೆ ಸಚಿವರು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT