ಕೋಮುಗಲಭೆ ಹಾಗೂ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಮಾಹಿತಿ ಸಿಕ್ಕರೆ ಬಿಗಿ ಭದ್ರತೆ ಮಾಡಲಾಗುತ್ತದೆ. ಆದರೂ ಕೆಲವು ಕಿಡಿಗೇಡಿಗಳು ವಾಟ್ಸ್ಆ್ಯಪ್, ಫೇಸ್ಬುಕ್ ಮೂಲಕ ಜನರಲ್ಲಿ ವಿಕಾರ ಭಾವನೆ, ಧರ್ಮದ ದುರ್ಬೋಧನೆ ಮಾಡಿ ಸಮಾಜ ಒಡೆಯುವ, ಕಲ್ಲು ತೂರಾಟ ಮಾಡುವ, ಬೆಂಕಿ ಹಚ್ಚುವ ನಡೆಸುತ್ತಿದ್ದಾರೆ. ಇಂತಹ ಕೃತ್ಯಗಳ ವಿರುದ್ಧ ಸರ್ಕಾರ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಂಡಿದೆ. ಗೃಹ ಸಚಿವ ಆರಗ ಜ್ಞಾನೇಂದ್ರ ಸಮರ್ಥವಾಗಿ ಕೆಲಸ ಮಾಡುತ್ತಿದ್ದಾರೆ. ಪುಂಡ, ಪೋಕರಿಗಳಿಗೆ ಮಟ್ಟಹಾಕುವ ಕೆಲಸವನ್ನು ಸರ್ಕಾರ ಸಮರ್ಥವಾಗಿ ಮಾಡುತ್ತಿದೆ ಎಂದರು.