ಯಡಿಯೂರಪ್ಪ ಮುಖ್ಯಮಂತ್ರಿಯಾಗಿ 17 ದಿನ ಕಳೆದರೂ ಸಂಪುಟ ರಚನೆಯಾಗಿಲ್ಲ. ರಾಜ್ಯಪಾಲರು ಸರ್ಕಾರವನ್ನು ವಜಾಗೊಳಿಸಬೇಕು ಎಂದು ಉಗ್ರಪ್ಪ ಹೇಳಿದ್ದಾರೆ.ಯಡಿಯೂರಪ್ಪ ಅವರು ಅಧಿಕಾರ ಸ್ವೀಕರಿಸಿದ 4 ದಿನಗಳಲ್ಲಿ ರಾಜ್ಯದಲ್ಲಿ ಜಲಪ್ರಳಯ ಉಂಟಾಗಿದೆ. ಇಂತಹ ಸಂದರ್ಭದಲ್ಲಿ ಸಚಿವ ಸಂಪುಟದ ಸಂಭ್ರಮಾಚರಣೆಗಿಂತ, ಸಂತ್ರಸ್ತರ ರಕ್ಷಣೆ ಸರ್ಕಾರಕ್ಕೆ ಮುಖ್ಯ ಎಂದು ಎದಿರೇಟು ನೀಡಿದ್ದಾರೆ.