<p><strong>ಉಡುಪಿ:</strong> ಡಾ.ಟಿಎಂಎ ಪೈ ಆಸ್ಪತ್ರೆಯಲ್ಲಿ ಬುಧವಾರ ಕೋವಿಡ್ ಸೋಂಕಿತ ಗರ್ಭಿಣಿಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಚೇತರಿಸಿಕೊಳ್ಳುತ್ತಿದ್ದು, ಮಗು ಆರೋಗ್ಯವಾಗಿದೆ ಎಂದು ಜಿಲ್ಲಾ ಕೋವಿಡ್ ನೋಡೆಲ್ ಅಧಿಕಾರಿ ಡಾ.ಪ್ರಶಾಂತ್ ಭಟ್ ತಿಳಿಸಿದರು.</p>.<p>ಕಾರ್ಕಳದ 22 ವರ್ಷದ ಮಹಿಳೆ ಜೂನ್ 16ರಂದು ಆಸ್ಪತ್ರೆಗೆ ದಾಖಲಾಗಿದ್ದರು. ತುರ್ತು ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ ಮಾಡಿಸಲಾಯಿತು. ಜಿಲ್ಲೆಯಲ್ಲಿ ಸೋಂಕಿತ ಗರ್ಭಿಣಿಗೆ ನಡೆದ ಮೊದಲ ಶಸ್ತ್ರಚಿಕಿತ್ಸೆ ಇದಾಗಿದ್ದು, ಯಶಸ್ವಿಯಾಗಿದೆ ಎಂದು ಮಾಹಿತಿ ನೀಡಿದರು.</p>.<p>ಪ್ರಸೂತಿ ತಜ್ಞೆ ಡಾ.ಶಶಿಕಲಾ ಕೆ.ಭಟ್, ಡಾ.ಸುರಭಿ ಸಿನ್ಹಾ, ಅರಿವಳಿಕೆ ತಜ್ಞ ಡಾ.ರೋಶನ್ ಶೆಟ್ಟಿ ತಂಡಕ್ಕೆ ವೆರೊನಿಕಾ, ಅಶ್ವಿನಿ, ಜಯಶ್ರೀ ನೆರವು ನೀಡಿದರು. ಡಾ.ಆಶಿಶ್ ಗುಪ್ತಾ, ಡಾ.ಚೈತನ್ಯ ಶಿಶುವಿನ ಆರೈಕೆ ಮಾಡುತ್ತಿದ್ದಾರೆ ಎಂದು ತಿಳಿಸಿದರು.</p>.<p>ಜಿಲ್ಲಾಧಿಕಾರಿ ಜಿ.ಜಗದೀಶ್ ಈ ಕುರಿತು ಮಾತನಾಡಿ, ‘ಮಗುವಿಗೆ ಕೋವಿಡ್ ಸೋಂಕು ತಗುಲದಂತೆ ವೈದ್ಯರು ಎಚ್ಚರ ವಹಿಸಿದ್ದಾರೆ. ಮಗುವಿಗೂ ಕೋವಿಡ್ ಪರೀಕ್ಷೆ ಮಾಡಲಾಗುವುದು. ವರದಿ ನೆಗೆಟಿವ್ ಬಂದ ಬಳಿಕ ತಾಯಿಯ ಜತೆ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುವುದು’ ಎಂದರು.</p>.<p><strong>4 ಪ್ರಕರಣ:</strong>ಬುಧವಾರ ನಾಲ್ವರಲ್ಲಿ ಕೋವಿಡ್–19 ಸೋಂಕು ದೃಢಪಟ್ಟಿದೆ. ಮೂವರು ಮುಂಬೈನಿಂದ ಬಂದವರಾಗಿದ್ದು, ಒಬ್ಬರಿಗೆ ಸ್ಥಳೀಯ ಸೋಂಕಿತನ ಸಂಪರ್ಕದಿಂದ ಸೋಂಕು ತಗುಲಿದೆ ಎಂದು ಜಿಲ್ಲಾಧಿಕಾರಿ ವಿವರ ನೀಡಿದರು.</p>.<p>ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1039ಕ್ಕೇರಿಕೆಯಾಗಿದ್ದು, ಇದುವರೆಗೂ 908 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 130 ಸಕ್ರಿಯ ಪ್ರಕರಣಗಳು ಮಾತ್ರ ಇವೆ. ಬುಧವಾರ 34 ಮಂದಿಯ ಗಂಟಲ ದ್ರವವನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು,118 ವರದಿಗಳು ಬರುವುದು ಬಾಕಿ ಇದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ಡಾ.ಟಿಎಂಎ ಪೈ ಆಸ್ಪತ್ರೆಯಲ್ಲಿ ಬುಧವಾರ ಕೋವಿಡ್ ಸೋಂಕಿತ ಗರ್ಭಿಣಿಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಚೇತರಿಸಿಕೊಳ್ಳುತ್ತಿದ್ದು, ಮಗು ಆರೋಗ್ಯವಾಗಿದೆ ಎಂದು ಜಿಲ್ಲಾ ಕೋವಿಡ್ ನೋಡೆಲ್ ಅಧಿಕಾರಿ ಡಾ.ಪ್ರಶಾಂತ್ ಭಟ್ ತಿಳಿಸಿದರು.</p>.<p>ಕಾರ್ಕಳದ 22 ವರ್ಷದ ಮಹಿಳೆ ಜೂನ್ 16ರಂದು ಆಸ್ಪತ್ರೆಗೆ ದಾಖಲಾಗಿದ್ದರು. ತುರ್ತು ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ ಮಾಡಿಸಲಾಯಿತು. ಜಿಲ್ಲೆಯಲ್ಲಿ ಸೋಂಕಿತ ಗರ್ಭಿಣಿಗೆ ನಡೆದ ಮೊದಲ ಶಸ್ತ್ರಚಿಕಿತ್ಸೆ ಇದಾಗಿದ್ದು, ಯಶಸ್ವಿಯಾಗಿದೆ ಎಂದು ಮಾಹಿತಿ ನೀಡಿದರು.</p>.<p>ಪ್ರಸೂತಿ ತಜ್ಞೆ ಡಾ.ಶಶಿಕಲಾ ಕೆ.ಭಟ್, ಡಾ.ಸುರಭಿ ಸಿನ್ಹಾ, ಅರಿವಳಿಕೆ ತಜ್ಞ ಡಾ.ರೋಶನ್ ಶೆಟ್ಟಿ ತಂಡಕ್ಕೆ ವೆರೊನಿಕಾ, ಅಶ್ವಿನಿ, ಜಯಶ್ರೀ ನೆರವು ನೀಡಿದರು. ಡಾ.ಆಶಿಶ್ ಗುಪ್ತಾ, ಡಾ.ಚೈತನ್ಯ ಶಿಶುವಿನ ಆರೈಕೆ ಮಾಡುತ್ತಿದ್ದಾರೆ ಎಂದು ತಿಳಿಸಿದರು.</p>.<p>ಜಿಲ್ಲಾಧಿಕಾರಿ ಜಿ.ಜಗದೀಶ್ ಈ ಕುರಿತು ಮಾತನಾಡಿ, ‘ಮಗುವಿಗೆ ಕೋವಿಡ್ ಸೋಂಕು ತಗುಲದಂತೆ ವೈದ್ಯರು ಎಚ್ಚರ ವಹಿಸಿದ್ದಾರೆ. ಮಗುವಿಗೂ ಕೋವಿಡ್ ಪರೀಕ್ಷೆ ಮಾಡಲಾಗುವುದು. ವರದಿ ನೆಗೆಟಿವ್ ಬಂದ ಬಳಿಕ ತಾಯಿಯ ಜತೆ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುವುದು’ ಎಂದರು.</p>.<p><strong>4 ಪ್ರಕರಣ:</strong>ಬುಧವಾರ ನಾಲ್ವರಲ್ಲಿ ಕೋವಿಡ್–19 ಸೋಂಕು ದೃಢಪಟ್ಟಿದೆ. ಮೂವರು ಮುಂಬೈನಿಂದ ಬಂದವರಾಗಿದ್ದು, ಒಬ್ಬರಿಗೆ ಸ್ಥಳೀಯ ಸೋಂಕಿತನ ಸಂಪರ್ಕದಿಂದ ಸೋಂಕು ತಗುಲಿದೆ ಎಂದು ಜಿಲ್ಲಾಧಿಕಾರಿ ವಿವರ ನೀಡಿದರು.</p>.<p>ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1039ಕ್ಕೇರಿಕೆಯಾಗಿದ್ದು, ಇದುವರೆಗೂ 908 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 130 ಸಕ್ರಿಯ ಪ್ರಕರಣಗಳು ಮಾತ್ರ ಇವೆ. ಬುಧವಾರ 34 ಮಂದಿಯ ಗಂಟಲ ದ್ರವವನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು,118 ವರದಿಗಳು ಬರುವುದು ಬಾಕಿ ಇದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>