<p><strong>ಉಡುಪಿ: </strong>ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಂಗಳವಾರ ಉಡುಪಿಯ ಕಾಂಗ್ರೆಸ್ ಕಚೇರಿಯಲ್ಲಿ ಆಸ್ಕರ್ ಫರ್ನಾಂಡಿಸ್ ಪಾರ್ಥಿವ ಶರೀರಕ್ಕೆ ಪುಷ್ಪನಮನ ಸಲ್ಲಿಸಿದರು.</p>.<p>ಬಳಿಕ ಮಾತನಾಡಿ, ಆಸ್ಕರ್ ಅವರೊಂದಿಗೆ ನಾಲ್ಕು ದಶಕಗಳ ರಾಜಕೀಯ ಒಡನಾಟವಿತ್ತು. ಸರಳ ಹಾಗೂ ಪ್ರಾಮಾಣಿಕ ವ್ಯಕ್ತಿತ್ವದ ಆಸ್ಕರ್ ಕೇಂದ್ರ ಹೆದ್ದಾರಿ ಸಚಿವರಾಗಿದ್ದಾಗ ಬೆಂಗಳೂರು-ಮೈಸೂರು ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸಿದರು. ಕಾರ್ಮಿಕ ಸಚಿವರಾಗಿದ್ದಾಗ ಇಎಸ್ಐ ಆಸ್ಪತ್ರೆಗಳನ್ನು ಮೆಡಿಕಲ್ ಕಾಲೇಜುಗಳಾಗಿ ಬದಲಾಯಿಸಿ, ಕಾರ್ಮಿಕರ ಮಕ್ಕಳು ಉಚಿತವಾಗಿ ವೈದ್ಯಕೀಯ ಶಿಕ್ಷಣ ಪಡೆಯುವ ಅವಕಾಶ ಮಾಡಿಕೊಟ್ಟರು. ಕಾರ್ಮಿಕ ಇಲಾಖೆಗೆ ಬಲ ತುಂಬುವುದರ ಜತೆಗೆ ಅಗತ್ಯ ಮೂಲಸೌಕರ್ಯ ಒದಗಿಸಿದರು. ಕರಾವಳಿಯಲ್ಲಿ ಪಕ್ಷ ಸಂಘಟನೆ ಹಾಗೂ ಪಕ್ಷ ಬಲವರ್ಧನೆಗೆ ಅವರ ಕೊಡುಗೆ ದೊಡ್ಡದು ಎಂದರು.</p>.<p><strong>ಇದನ್ನೂ ಓದಿ–</strong> <a href="https://www.prajavani.net/district/dakshina-kannada/former-union-minister-senior-congress-leader-oscar-fernandes-passes-away-at-mangaluru-hospital-866143.html" target="_blank">ಕಾಂಗ್ರೆಸ್ ಮುಖಂಡ ಆಸ್ಕರ್ ಫರ್ನಾಂಡಿಸ್ ನಿಧನ</a></p>.<p>ಕಾಂಗ್ರೆಸ್ನಲ್ಲಿ ಮಹತ್ವದ ಜವಾಬ್ದಾರಿಗಳನ್ನು ನಿಭಾಯಿಸಿದ್ದ ಆಸ್ಕರ್ ಅವರ ನಿಧನದಿಂದ ಪಕ್ಷಕ್ಕೆ ದೊಡ್ಡ ನಷ್ಟವಾಗಿದೆ ಎಂದರು.</p>.<p>ಈ ಸಂದರ್ಭ ಕೆಪಿಸಿಸಿ ಕಾರ್ಯಾಧ್ಯಕ್ಷ ಧೃವನಾರಾಯಣ್, ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ: </strong>ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಂಗಳವಾರ ಉಡುಪಿಯ ಕಾಂಗ್ರೆಸ್ ಕಚೇರಿಯಲ್ಲಿ ಆಸ್ಕರ್ ಫರ್ನಾಂಡಿಸ್ ಪಾರ್ಥಿವ ಶರೀರಕ್ಕೆ ಪುಷ್ಪನಮನ ಸಲ್ಲಿಸಿದರು.</p>.<p>ಬಳಿಕ ಮಾತನಾಡಿ, ಆಸ್ಕರ್ ಅವರೊಂದಿಗೆ ನಾಲ್ಕು ದಶಕಗಳ ರಾಜಕೀಯ ಒಡನಾಟವಿತ್ತು. ಸರಳ ಹಾಗೂ ಪ್ರಾಮಾಣಿಕ ವ್ಯಕ್ತಿತ್ವದ ಆಸ್ಕರ್ ಕೇಂದ್ರ ಹೆದ್ದಾರಿ ಸಚಿವರಾಗಿದ್ದಾಗ ಬೆಂಗಳೂರು-ಮೈಸೂರು ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸಿದರು. ಕಾರ್ಮಿಕ ಸಚಿವರಾಗಿದ್ದಾಗ ಇಎಸ್ಐ ಆಸ್ಪತ್ರೆಗಳನ್ನು ಮೆಡಿಕಲ್ ಕಾಲೇಜುಗಳಾಗಿ ಬದಲಾಯಿಸಿ, ಕಾರ್ಮಿಕರ ಮಕ್ಕಳು ಉಚಿತವಾಗಿ ವೈದ್ಯಕೀಯ ಶಿಕ್ಷಣ ಪಡೆಯುವ ಅವಕಾಶ ಮಾಡಿಕೊಟ್ಟರು. ಕಾರ್ಮಿಕ ಇಲಾಖೆಗೆ ಬಲ ತುಂಬುವುದರ ಜತೆಗೆ ಅಗತ್ಯ ಮೂಲಸೌಕರ್ಯ ಒದಗಿಸಿದರು. ಕರಾವಳಿಯಲ್ಲಿ ಪಕ್ಷ ಸಂಘಟನೆ ಹಾಗೂ ಪಕ್ಷ ಬಲವರ್ಧನೆಗೆ ಅವರ ಕೊಡುಗೆ ದೊಡ್ಡದು ಎಂದರು.</p>.<p><strong>ಇದನ್ನೂ ಓದಿ–</strong> <a href="https://www.prajavani.net/district/dakshina-kannada/former-union-minister-senior-congress-leader-oscar-fernandes-passes-away-at-mangaluru-hospital-866143.html" target="_blank">ಕಾಂಗ್ರೆಸ್ ಮುಖಂಡ ಆಸ್ಕರ್ ಫರ್ನಾಂಡಿಸ್ ನಿಧನ</a></p>.<p>ಕಾಂಗ್ರೆಸ್ನಲ್ಲಿ ಮಹತ್ವದ ಜವಾಬ್ದಾರಿಗಳನ್ನು ನಿಭಾಯಿಸಿದ್ದ ಆಸ್ಕರ್ ಅವರ ನಿಧನದಿಂದ ಪಕ್ಷಕ್ಕೆ ದೊಡ್ಡ ನಷ್ಟವಾಗಿದೆ ಎಂದರು.</p>.<p>ಈ ಸಂದರ್ಭ ಕೆಪಿಸಿಸಿ ಕಾರ್ಯಾಧ್ಯಕ್ಷ ಧೃವನಾರಾಯಣ್, ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>