ದೇವರ ದರ್ಶನಕ್ಕೆ ಬೆಳಿಗ್ಗೆಯೇ ಹೆಚ್ಚಿನ ಭಕ್ತರು ಕೃಷ್ಣಮಠಕ್ಕೆ ಬಂದಿದ್ದರು. ಆದರೆ, ಬೆಳಿಗ್ಗೆ ದರ್ಶನಕ್ಕೆ ಅವಕಾಶ ಇರದಿದ್ದರಿಂದ ಕನಕನ ಕಿಂಡಿಯಲ್ಲಿ ದರ್ಶನ ಪಡೆದರು. ನಿರಂತರ ಮಳೆ ಸುರಿಯುತ್ತಿದ್ದರೂ ಸರದಿ ಸಾಲಿನಲ್ಲಿ ನಿಂತು ಭಕ್ತರು ದೇವರ ದರ್ಶನ ಪಡೆದರು. ಹೆಚ್ಚಿನ ಭಕ್ತರು ಮಾಸ್ಕ್ ಧರಿಸಿ ಬಂದಿದ್ದರೂ ವ್ಯಕ್ತಿಗತ ಅಂತರ ಕಾಣಿಸಲಿಲ್ಲ.