<p><strong>ಉಡುಪಿ: </strong>ಕೃಷ್ಣನೂರು ಉಡುಪಿಯಲ್ಲಿ ಸೆ.11ರಂದು ಕೃಷ್ಣ ಜನ್ಮಾಷ್ಟಮಿ ನಡೆಯಲಿದ್ದು, ಸಿದ್ಧತೆಗಳು ಭರದಿಂದ ಸಾಗಿವೆ.</p>.<p>ಕೊರೊನಾ ಹಿನ್ನೆಲೆಯಲ್ಲಿ ಈ ವರ್ಷ ಕೃಷ್ಣ ಜನ್ಮಾಷ್ಟಮಿ ಹಾಗೂ ವಿಟ್ಲಪಿಂಡಿ ಉತ್ಸವದಲ್ಲಿ ಭಾಗವಹಿಸಲು ಸಾರ್ವಜನಿಕರಿಗೆ ಅವಕಾಶವಿಲ್ಲ. ಆದರೆ, ಪ್ರತಿವರ್ಷ ನಡೆಯುತ್ತಿದ್ದ ಸಾಂಪ್ರದಾಯಿಕ ಆಚರಣೆಗಳು ನಡೆಯಲಿವೆ ಎಂದು ಮಠದ ಸಿಬ್ಬಂದಿ ತಿಳಿಸಿದ್ದಾರೆ.</p>.<p>ಕೃಷ್ಣ ಲೀಲೋತ್ಸವಗಳಲ್ಲಿ ಪ್ರಮುಖ ಆಕರ್ಷಣೆಯಾದ ಮೊಸರು ಕುಡಿಕೆ ಒಡೆಯುವ ಆಚರಣೆ ಈ ಬಾರಿಯೂ ನಡೆಯುತ್ತಿದ್ದು, ರಥಬೀದಿಯ ಹಲವೆಡೆ ಗುರ್ಜಿಗಳನ್ನು ಸಿದ್ಧಪಡಿಸಲಾಗಿದೆ. ಉತ್ಸವದ ಸಿದ್ಧತೆಗಳು ಅಂತಿಮ ಹಂತದಲ್ಲಿವೆ.</p>.<p>ಪ್ರತಿವರ್ಷ ಉಡುಪಿಯ ಕೃಷ್ಣ ಜನ್ಮಾಷ್ಟಮಿ ಹಾಗೂ ವಿಟ್ಲಪಿಂಡಿ ಉತ್ಸವ ವಿಜೃಂಭಣೆಯಿಂದ ನಡೆಯುತ್ತಿತ್ತು. ಹೊರ ಜಿಲ್ಲೆ, ರಾಜ್ಯ, ವಿದೇಶಗಳಿಂದ ಸಾವಿರಾರು ಭಕ್ತರು ಆಗಮಿಸಿ ಕೃಷ್ಣನ ಲೀಲೋತ್ಸವಗಳನ್ನು ಕಣ್ತುಂಬಿಕೊಳ್ಳುತ್ತಿದ್ದರು.</p>.<p>ಹುಲಿವೇಷ, ಸಾಂಸ್ಕತಿಕ ಕಾರ್ಯಕ್ರಮಗಳು,ವೇಷಧಾರಿಗಳು ಉತ್ಸವದ ಅಂದವನ್ನು ಹೆಚ್ಚಿಸುತ್ತಿದ್ದರು. ಈ ವರ್ಷ ಕೊರೊನಾದಿಂದ ಉತ್ಸವ ಕಳೆಗುಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ: </strong>ಕೃಷ್ಣನೂರು ಉಡುಪಿಯಲ್ಲಿ ಸೆ.11ರಂದು ಕೃಷ್ಣ ಜನ್ಮಾಷ್ಟಮಿ ನಡೆಯಲಿದ್ದು, ಸಿದ್ಧತೆಗಳು ಭರದಿಂದ ಸಾಗಿವೆ.</p>.<p>ಕೊರೊನಾ ಹಿನ್ನೆಲೆಯಲ್ಲಿ ಈ ವರ್ಷ ಕೃಷ್ಣ ಜನ್ಮಾಷ್ಟಮಿ ಹಾಗೂ ವಿಟ್ಲಪಿಂಡಿ ಉತ್ಸವದಲ್ಲಿ ಭಾಗವಹಿಸಲು ಸಾರ್ವಜನಿಕರಿಗೆ ಅವಕಾಶವಿಲ್ಲ. ಆದರೆ, ಪ್ರತಿವರ್ಷ ನಡೆಯುತ್ತಿದ್ದ ಸಾಂಪ್ರದಾಯಿಕ ಆಚರಣೆಗಳು ನಡೆಯಲಿವೆ ಎಂದು ಮಠದ ಸಿಬ್ಬಂದಿ ತಿಳಿಸಿದ್ದಾರೆ.</p>.<p>ಕೃಷ್ಣ ಲೀಲೋತ್ಸವಗಳಲ್ಲಿ ಪ್ರಮುಖ ಆಕರ್ಷಣೆಯಾದ ಮೊಸರು ಕುಡಿಕೆ ಒಡೆಯುವ ಆಚರಣೆ ಈ ಬಾರಿಯೂ ನಡೆಯುತ್ತಿದ್ದು, ರಥಬೀದಿಯ ಹಲವೆಡೆ ಗುರ್ಜಿಗಳನ್ನು ಸಿದ್ಧಪಡಿಸಲಾಗಿದೆ. ಉತ್ಸವದ ಸಿದ್ಧತೆಗಳು ಅಂತಿಮ ಹಂತದಲ್ಲಿವೆ.</p>.<p>ಪ್ರತಿವರ್ಷ ಉಡುಪಿಯ ಕೃಷ್ಣ ಜನ್ಮಾಷ್ಟಮಿ ಹಾಗೂ ವಿಟ್ಲಪಿಂಡಿ ಉತ್ಸವ ವಿಜೃಂಭಣೆಯಿಂದ ನಡೆಯುತ್ತಿತ್ತು. ಹೊರ ಜಿಲ್ಲೆ, ರಾಜ್ಯ, ವಿದೇಶಗಳಿಂದ ಸಾವಿರಾರು ಭಕ್ತರು ಆಗಮಿಸಿ ಕೃಷ್ಣನ ಲೀಲೋತ್ಸವಗಳನ್ನು ಕಣ್ತುಂಬಿಕೊಳ್ಳುತ್ತಿದ್ದರು.</p>.<p>ಹುಲಿವೇಷ, ಸಾಂಸ್ಕತಿಕ ಕಾರ್ಯಕ್ರಮಗಳು,ವೇಷಧಾರಿಗಳು ಉತ್ಸವದ ಅಂದವನ್ನು ಹೆಚ್ಚಿಸುತ್ತಿದ್ದರು. ಈ ವರ್ಷ ಕೊರೊನಾದಿಂದ ಉತ್ಸವ ಕಳೆಗುಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>