<p><strong>ಉಡುಪಿ:</strong> ಉಡುಪಿಯಲ್ಲಿ ಸೌರ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಿಸುತ್ತಿದ್ದು, ಪರ್ಯಾಯ ಪುತ್ತಿಗೆ ಮಠದ ಆಶ್ರಯದಲ್ಲಿ ಭಾನುವಾರ ದಿನವಿಡೀ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು.</p><p>ರಾಜಾಂಗಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳೂ ಮೇಳೈಸಿದ್ದವು. ಪರ್ಯಾಯ ಪುತ್ತಿಗೆ ಮಠದ ಸುಶ್ರೀಂದ್ರತೀರ್ಥ ಸ್ವಾಮೀಜಿ ಕೃಷ್ಣನಿಗೆ ಬಾಲಗೋಪಾಲ ಅಲಂಕಾರ ಮಾಡಿದ್ದರು. ಪುತ್ತಿಗೆ ಮಠಾಧೀಶ ಸುಗುಣೇಂದ್ರತೀರ್ಥ ಶ್ರೀಪಾದರು ಮಹಾಪೂಜೆ ನಡೆಸಿದರು.</p><p>ಜನ್ಮಾಷ್ಟಮಿ ಅಂಗವಾಗಿ ನಡೆದ ‘ಸ್ವಾಮಿ ಶ್ರೀ ಕೃಷ್ಣಾಯ ನಮಃ’ 1008 ಬಾರಿ ಮಂತ್ರ ಪಠಣ ಕಾರ್ಯಕ್ರಮಕ್ಕೆ ಸುಗುಣೇಂದ್ರ ತೀರ್ಥ ಶ್ರೀಪಾದರು ಚಾಲನೆ ನೀಡಿದರು. ಹಬ್ಬದ ಪ್ರಯುಕ್ತ ಕೃಷ್ಣ ಮಠಕ್ಕೆ ಅಪಾರ ಸಂಖ್ಯೆಯ ಭಕ್ತರು ಭೇಟಿ ನೀಡಿದ್ದರು.</p><p>ಜಿಲ್ಲೆಯ ವಿವಿಧೆಡೆಯಿಂದ ಬಂದಿದ್ದ ಭಕ್ತರು ಬೆಳಿಗ್ಗೆಯಿಂದಲೇ ಸರದಿಯಲ್ಲಿ ನಿಂತು ದೇವರ ದರ್ಶನ ಪಡೆದು, ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಕಣ್ತುಂಬಿಕೊಂಡರು. ರಥಬೀದಿ ಹಾಗೂ ಕೃಷ್ಣಮಠವನ್ನು ಹೂವು, ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ಉಡುಪಿಯಲ್ಲಿ ಸೌರ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಿಸುತ್ತಿದ್ದು, ಪರ್ಯಾಯ ಪುತ್ತಿಗೆ ಮಠದ ಆಶ್ರಯದಲ್ಲಿ ಭಾನುವಾರ ದಿನವಿಡೀ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು.</p><p>ರಾಜಾಂಗಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳೂ ಮೇಳೈಸಿದ್ದವು. ಪರ್ಯಾಯ ಪುತ್ತಿಗೆ ಮಠದ ಸುಶ್ರೀಂದ್ರತೀರ್ಥ ಸ್ವಾಮೀಜಿ ಕೃಷ್ಣನಿಗೆ ಬಾಲಗೋಪಾಲ ಅಲಂಕಾರ ಮಾಡಿದ್ದರು. ಪುತ್ತಿಗೆ ಮಠಾಧೀಶ ಸುಗುಣೇಂದ್ರತೀರ್ಥ ಶ್ರೀಪಾದರು ಮಹಾಪೂಜೆ ನಡೆಸಿದರು.</p><p>ಜನ್ಮಾಷ್ಟಮಿ ಅಂಗವಾಗಿ ನಡೆದ ‘ಸ್ವಾಮಿ ಶ್ರೀ ಕೃಷ್ಣಾಯ ನಮಃ’ 1008 ಬಾರಿ ಮಂತ್ರ ಪಠಣ ಕಾರ್ಯಕ್ರಮಕ್ಕೆ ಸುಗುಣೇಂದ್ರ ತೀರ್ಥ ಶ್ರೀಪಾದರು ಚಾಲನೆ ನೀಡಿದರು. ಹಬ್ಬದ ಪ್ರಯುಕ್ತ ಕೃಷ್ಣ ಮಠಕ್ಕೆ ಅಪಾರ ಸಂಖ್ಯೆಯ ಭಕ್ತರು ಭೇಟಿ ನೀಡಿದ್ದರು.</p><p>ಜಿಲ್ಲೆಯ ವಿವಿಧೆಡೆಯಿಂದ ಬಂದಿದ್ದ ಭಕ್ತರು ಬೆಳಿಗ್ಗೆಯಿಂದಲೇ ಸರದಿಯಲ್ಲಿ ನಿಂತು ದೇವರ ದರ್ಶನ ಪಡೆದು, ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಕಣ್ತುಂಬಿಕೊಂಡರು. ರಥಬೀದಿ ಹಾಗೂ ಕೃಷ್ಣಮಠವನ್ನು ಹೂವು, ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>