<p><strong>ಉಡುಪಿ:</strong> ಪರ್ಯಾಯ ಪುತ್ತಿಗೆ ಶ್ರೀಕೃಷ್ಣ ಮಠವು ಆಯೋಜಿಸಿರುವ ಒಂದು ತಿಂಗಳ ಬೃಹತ್ ಗೀತೋತ್ಸವಕ್ಕೆ ಪೇಜಾವರ ಮಠಾಧೀಶ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಕೃಷ್ಣಮಠದ ರಾಜಾಂಗಣದಲ್ಲಿ ಭಗವದ್ಗೀತೆ ಗ್ರಂಥವನ್ನು ರಥದಲ್ಲಿರಿಸುವ ಮೂಲಕ ಶನಿವಾರ ಚಾಲನೆ ನೀಡಿದರು.</p>.<p>ಬಳಿಕ ಮಾತನಾಡಿದ ಅವರು, ‘ಅವರವರು ಅವರವರ ಕರ್ತವ್ಯ ನಿಭಾಯಿಸದಿರುವುದು ಜಗತ್ತು ಹಿಂದೆ ಉಳಿಯಲು ಕಾರಣ. ನಿತ್ಯ ಬದುಕಿನಲ್ಲಿ ಕೃಷ್ಣೋಪದೇಶ ಅಳವಡಿಸಿಕೊಂಡರೆ ಒಳಿತಾಗುತ್ತದೆ’ ಎಂದರು.</p>.<p>‘ಭಗವದ್ಗೀತೆಯು ಮತಿ ಉಳ್ಳವರಿಗೆ ಬೇಕಾದ ಗ್ರಂಥವಾಗಿರುವುದರಿಂದ ಅದು ಮತೀಯ ಗ್ರಂಥ. ಮತಿವಂತರು ಅದನ್ನು ಸ್ವೀಕರಿಸಬೇಕು’ ಎಂದು ಹೇಳಿದರು.</p>.<p>ಪರ್ಯಾಯ ಪುತ್ತಿಗೆ ಮಠಾಧೀಶ ಸುಗುಣೇಂದ್ರ ತೀರ್ಥ ಸ್ವಾಮೀಜಿ, ಕಿರಿಯ ಯತಿ ಸುಶ್ರೀಂದ್ರ ತೀರ್ಥ ಸ್ವಾಮೀಜಿ ಉಪಸ್ಥಿತರಿದ್ದರು.</p>.<p>ಬೃಹತ್ ಗೀತೋತ್ಸವದ ಅಂಗವಾಗಿ ಇದೇ 28ರಂದು ಲಕ್ಷ ಕಂಠ ಗೀತಾ ಪಾರಾಯಣ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಪಾಲ್ಗೊಳ್ಳಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ಪರ್ಯಾಯ ಪುತ್ತಿಗೆ ಶ್ರೀಕೃಷ್ಣ ಮಠವು ಆಯೋಜಿಸಿರುವ ಒಂದು ತಿಂಗಳ ಬೃಹತ್ ಗೀತೋತ್ಸವಕ್ಕೆ ಪೇಜಾವರ ಮಠಾಧೀಶ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಕೃಷ್ಣಮಠದ ರಾಜಾಂಗಣದಲ್ಲಿ ಭಗವದ್ಗೀತೆ ಗ್ರಂಥವನ್ನು ರಥದಲ್ಲಿರಿಸುವ ಮೂಲಕ ಶನಿವಾರ ಚಾಲನೆ ನೀಡಿದರು.</p>.<p>ಬಳಿಕ ಮಾತನಾಡಿದ ಅವರು, ‘ಅವರವರು ಅವರವರ ಕರ್ತವ್ಯ ನಿಭಾಯಿಸದಿರುವುದು ಜಗತ್ತು ಹಿಂದೆ ಉಳಿಯಲು ಕಾರಣ. ನಿತ್ಯ ಬದುಕಿನಲ್ಲಿ ಕೃಷ್ಣೋಪದೇಶ ಅಳವಡಿಸಿಕೊಂಡರೆ ಒಳಿತಾಗುತ್ತದೆ’ ಎಂದರು.</p>.<p>‘ಭಗವದ್ಗೀತೆಯು ಮತಿ ಉಳ್ಳವರಿಗೆ ಬೇಕಾದ ಗ್ರಂಥವಾಗಿರುವುದರಿಂದ ಅದು ಮತೀಯ ಗ್ರಂಥ. ಮತಿವಂತರು ಅದನ್ನು ಸ್ವೀಕರಿಸಬೇಕು’ ಎಂದು ಹೇಳಿದರು.</p>.<p>ಪರ್ಯಾಯ ಪುತ್ತಿಗೆ ಮಠಾಧೀಶ ಸುಗುಣೇಂದ್ರ ತೀರ್ಥ ಸ್ವಾಮೀಜಿ, ಕಿರಿಯ ಯತಿ ಸುಶ್ರೀಂದ್ರ ತೀರ್ಥ ಸ್ವಾಮೀಜಿ ಉಪಸ್ಥಿತರಿದ್ದರು.</p>.<p>ಬೃಹತ್ ಗೀತೋತ್ಸವದ ಅಂಗವಾಗಿ ಇದೇ 28ರಂದು ಲಕ್ಷ ಕಂಠ ಗೀತಾ ಪಾರಾಯಣ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಪಾಲ್ಗೊಳ್ಳಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>