<p><strong>ಉಡುಪಿ:</strong> ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಮಂಗಳವಾರ ಕೃಷ್ಣಮಠಕ್ಕೆ ಭೇಟಿನೀಡಿ ದೇವರ ದರ್ಶನ ಪಡೆದರು. ಬಳಿಕ ಪರ್ಯಾಯ ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರ ತೀರ್ಥ ಶ್ರೀ ಹಾಗೂ ಕಿರಿಯ ಯತಿ ಸುಶ್ರೀಂದ್ರ ತೀರ್ಥ ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.</p>.<p>ಈ ಸಂದರ್ಭ ಪರ್ಯಾಯ ಶ್ರೀಗಳ ಮುಖ್ಯ ಯೋಜನೆಗಳಲ್ಲೊಂದಾದ ಕೋಟಿಗೀತಾ ಲೇಖನ ಯಜ್ಞದ ದೀಕ್ಷೆ ಸ್ವೀಕರಿಸಿ ಮೆಚ್ಚುಗೆ ವ್ಯಕ್ತಪಡಿಸಿದ ರವಿಶಾಸ್ತ್ರೀ, ಕೃಷ್ಣ ಭಕ್ತರು ಸ್ವಯಂಸ್ಫೂರ್ತಿಯಿಂದ ಗೀತಾ ಲೇಖನ ಯಜ್ಞ ಸಂಕಲ್ಪ ಮಾಡಬೇಕು ಎಂದು ಕರೆ ನೀಡಿದರು.</p>.<p>ಸುಗುಣೇಂದ್ರ ತೀರ್ಥ ಶ್ರೀಗಳು ಮಾತನಾಡಿ, ಉಡುಪಿಯ ಬಾಲಕೃಷ್ಣನಿಗೆ ನೂರನೇ ಅಲಂಕಾರ ನಡೆದಿದ್ದು ಈ ಸಂದರ್ಭದಲ್ಲಿ ಖ್ಯಾತ ಕ್ರಿಕೆಟಿಗ ರವಿಶಾಸ್ತ್ರೀ ದೇವರ ದರ್ಶನ ಪಡೆದಿರುವುದು ಯೋಗಾಯೋಗ ಎಂದರು.</p>.<p>ಈ ಸಂದರ್ಭ ಮಠದ ಕಾರ್ಯದರ್ಶಿ ಪ್ರಸನ್ನ ಆಚಾರ್ಯ, ವಾದಿರಾಜ ಪೆಜತ್ತಾಯ, ಲಾತವ್ಯ ಆಚಾರ್ಯ, ವಿನಯ ಬನ್ನಂಜೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಮಂಗಳವಾರ ಕೃಷ್ಣಮಠಕ್ಕೆ ಭೇಟಿನೀಡಿ ದೇವರ ದರ್ಶನ ಪಡೆದರು. ಬಳಿಕ ಪರ್ಯಾಯ ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರ ತೀರ್ಥ ಶ್ರೀ ಹಾಗೂ ಕಿರಿಯ ಯತಿ ಸುಶ್ರೀಂದ್ರ ತೀರ್ಥ ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.</p>.<p>ಈ ಸಂದರ್ಭ ಪರ್ಯಾಯ ಶ್ರೀಗಳ ಮುಖ್ಯ ಯೋಜನೆಗಳಲ್ಲೊಂದಾದ ಕೋಟಿಗೀತಾ ಲೇಖನ ಯಜ್ಞದ ದೀಕ್ಷೆ ಸ್ವೀಕರಿಸಿ ಮೆಚ್ಚುಗೆ ವ್ಯಕ್ತಪಡಿಸಿದ ರವಿಶಾಸ್ತ್ರೀ, ಕೃಷ್ಣ ಭಕ್ತರು ಸ್ವಯಂಸ್ಫೂರ್ತಿಯಿಂದ ಗೀತಾ ಲೇಖನ ಯಜ್ಞ ಸಂಕಲ್ಪ ಮಾಡಬೇಕು ಎಂದು ಕರೆ ನೀಡಿದರು.</p>.<p>ಸುಗುಣೇಂದ್ರ ತೀರ್ಥ ಶ್ರೀಗಳು ಮಾತನಾಡಿ, ಉಡುಪಿಯ ಬಾಲಕೃಷ್ಣನಿಗೆ ನೂರನೇ ಅಲಂಕಾರ ನಡೆದಿದ್ದು ಈ ಸಂದರ್ಭದಲ್ಲಿ ಖ್ಯಾತ ಕ್ರಿಕೆಟಿಗ ರವಿಶಾಸ್ತ್ರೀ ದೇವರ ದರ್ಶನ ಪಡೆದಿರುವುದು ಯೋಗಾಯೋಗ ಎಂದರು.</p>.<p>ಈ ಸಂದರ್ಭ ಮಠದ ಕಾರ್ಯದರ್ಶಿ ಪ್ರಸನ್ನ ಆಚಾರ್ಯ, ವಾದಿರಾಜ ಪೆಜತ್ತಾಯ, ಲಾತವ್ಯ ಆಚಾರ್ಯ, ವಿನಯ ಬನ್ನಂಜೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>