ಬೆಳಿಗ್ಗೆ 6ಕ್ಕೆ ಆರಂಭವಾಗುವ ಅಲಂಕಾರ ಪೂಜೆಯಿಂದ ಸಂಜೆಯ ಚಾಮರ ಸೇವೆಯವರೆಗೆ ಪೂಜಾ ವಿಧಿವಿಧಾನಗಳು ನಡೆಯಲಿವೆ. ಚಾಮರ ಸೇವೆ ನಂತರ ರಾತ್ರಿ 9ರವರೆಗೆ ಭಕ್ತರಿಗೆ ಕೃಷ್ಣನ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಭಕ್ತರಿಗೆ ಮಧ್ಯಾಹ್ನ ಹಾಗೂ ರಾತ್ರಿ ಪ್ರಸಾದ (ಭೋಜನ) ವ್ಯವಸ್ಥೆ ಇದೆ ಎಂದು ಪರ್ಯಾಯ ಅದಮಾರು ಮಠದ ವ್ಯವಸ್ಥಾಪಕ ಗೋವಿಂದರಾಜ್ ತಿಳಿಸಿದ್ದಾರೆ.