ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕ್ಷುಲ್ಲಕ ರಾಜಕಾರಣದಿಂದ ಮಿತಿಮೀರಿದ ಭ್ರಷ್ಟಾಚಾರ, ಕೌಟುಂಬಿಕ ರಾಜಕಾರಣ ಹೆಚ್ಚಾಗಿದೆ. ರಾಜ್ಯದ ಜೆಸಿಬಿ ಪಕ್ಷಗಳು (ಜೆಡಿಎಸ್, ಕಾಂಗ್ರೆಸ್, ಬಿಜೆಪಿ) ಅಕ್ರಮ, ಸ್ವಜನ ಪಕ್ಷಪಾತ, ಬ್ರಹ್ಮಾಂಡ ಭ್ರಷ್ಟಾಚಾರ ಮಾಡಿ ರಾಜ್ಯವನ್ನು ಹಾಳು ಮಾಡಿದ್ದಾರೆ. ಇದಕ್ಕೆ ವಿರುದ್ಧವಾಗಿ ಕೆಆರ್ಎಸ್ ಪ್ರಾದೇಶಿಕ ಪಕ್ಷ ಜನರ ಆಶೋತ್ತರಗಳಿಗೆ ಸ್ಪಂದಿಸಲಿದೆ ಎಂದರು.