ಸರ್ಕಾರಿ ಕಚೇರಿಗಳಲ್ಲಿ ಮೂಲಸೌಕರ್ಯಗಳು ಸಮರ್ಪಕವಾಗಿವೆಯೇ, ಸಾರ್ವಜನಿಕರೊಂದಿಗೆ ಸಿಬ್ಬಂದಿಯ ವರ್ತನೆ ಸರಿ ಇದೆಯೇ, ಸರ್ಕಾರಿ ಸೇವೆಗಳನ್ನು ಪಡೆಯಲು ಶುಲ್ಕದ ದರ ಪಟ್ಟಿ ಪ್ರದರ್ಶನ ಮಾಡಲಾಗಿದೆಯೇ, ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ ಇದೆಯೇ, ಸರ್ಕಾರಿ ಸೇವೆ ನೀಡಲು ಲಂಚ ಸ್ವೀಕರಿಸಲಾಗುತ್ತಿದೆಯೇ ಎಂಬ ಬಗ್ಗೆ ಖುದ್ದು ಪರಿಶೀಲಿಸಿ ತಹಶೀಲ್ದಾರ್ ಅಥವಾ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರುವ ಕೆಲಸ ಮಾಡಲಾಗುತ್ತಿದೆ ಎಂದು ರವಿಕೃಷ್ಣಾರೆಡ್ಡಿ ತಿಳಿಸಿದರು.