ಉಡುಪಿ: ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬುಧವಾರ ಜಿಲ್ಲೆಯಾದ್ಯಂತ ಕೆಎಸ್ಆರ್ಟಿಸಿ ಬಸ್ಗಳು ಸಂಚರಿಸುತ್ತಿಲ್ಲ.
ಖಾಸಗಿ ಬಸ್ಗಳ ಸಂಚಾರ ಎಂದಿನಂತಿದೆ. ಜಿಲ್ಲೆಯ ಎಲ್ಲ ಮಾರ್ಗಗಳಲ್ಲಿ ಖಾಸಗಿ ಬಸ್ಗಳ ಸಂಚಾರ ಇರುವುದರಿಂದ ಜಿಲ್ಲಾ ವ್ಯಾಪ್ತಿಯಲ್ಲಿ ಓಡಾಡುವ ಹಾಗೂ ಉಡುಪಿ ಮಂಗಳೂರು ಮಧ್ಯೆ ಸಂಚರಿಸುವ ಪ್ರಯಾಣಿಕರಿಗೆಸಮಸ್ಯೆಯಾಗಲಿಲ್ಲ.
ಹೊರ ಜಿಲ್ಲೆಗಳಿಗೆ ತೆರಳಲು ಕೆಎಸ್ಆರ್ಟಿಸಿ ನಿಲ್ದಾಣಕ್ಕೆ ಬಂದಿದ್ದ ಕೆಲವು ಪ್ರಯಾಣಿಕರಿಗೆ ಸಮಸ್ಯೆಯಾಯಿತು.