<p><strong>ಕುಂದಾಪುರ:</strong> ಕೋಟೇಶ್ವರ ಸಮೀಪದ ಬೀಜಾಡಿ ಗ್ರಾಮ ಪಂಚಾಯಿತಿಯ ಬಂಡಿಕಡು ಬೊಬ್ಬರ್ಯ ದೇವಸ್ಥಾನ ಸೇವಾ ಸಮಿತಿ ಹಾಗೂ ಕಮ್ತೀಯಾರ್ ಬೆಟ್ಟು ಹೋದ್ರಾಳಿಯ ಮಹಿಳಾ ಸೇವಾ ಸಂಘದ ವತಿಯಿಂದ ಬಂಡಿಕಡು ಬೊಬ್ಬರ್ಯ ದೇವಸ್ಥಾನದ ವರ್ಧಂತ್ಯೋತ್ಸವ ನಡೆಯಿತು.</p>.<p>ದೇವಸ್ಥಾನಕ್ಕೆ ಭೇಟಿ ನೀಡಿದ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಅವರಿಗೆ ಮನವಿ ಸಲ್ಲಿಸಿದ ಬಂಡಿಕಡು ಬೊಬ್ಬರ್ಯ ಸೇವಾ ಸಮಿತಿಯ ಪ್ರಮುಖರು ದೇವಸ್ಥಾನಕ್ಕೆ ಸಮರ್ಪಕ ರಸ್ತೆ ಸಂಪರ್ಕ ಕಲ್ಪಿಸುವಂತೆ ಕೋರಿದರು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ಶಾಸಕರು ರಸ್ತೆ ನಿರ್ಮಾಣಕ್ಕೆ ಖಾಸಗಿ ಜಾಗದ ಅವಶ್ಯಕತೆ ಇರುವುದರಿಂದ ಮಾತುಕತೆ ನಡೆಸಬೇಕಾಗಿದೆ. ಇದಾದ ಬಳಿಕ ಸರ್ಕಾರದ ಅನುದಾನ ತರುವ ಪ್ರಯತ್ನ ಮಾಡಲಾಗುವುದು ಎಂದರು.</p>.<p>ಬಂಡಿಕಡು ಬೊಬ್ಬರ್ಯ ದೇವಸ್ಥಾನ ಸೇವಾ ಸಮಿತಿ ಗೌರವಾಧ್ಯಕ್ಷ ಶ್ರೀಧರ್ ಎಂ ಮೊಗವೀರ, ಅಧ್ಯಕ್ಷ ಬಸವರಾಜ್, ಕಾರ್ಯದರ್ಶಿ ಜಗನ್ನಾಥ್, ಬೀಜಾಡಿ ಗ್ರಾಮ ಪಂಚಾಯಿತ ಸದಸ್ಯರಾದ ವಿಶ್ವನಾಥ ಮೊಗವೀರ, ಪೂರ್ಣಿಮಾ, ಪ್ರಸನ್ನ ದೇವಾಡಿಗ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಂದಾಪುರ:</strong> ಕೋಟೇಶ್ವರ ಸಮೀಪದ ಬೀಜಾಡಿ ಗ್ರಾಮ ಪಂಚಾಯಿತಿಯ ಬಂಡಿಕಡು ಬೊಬ್ಬರ್ಯ ದೇವಸ್ಥಾನ ಸೇವಾ ಸಮಿತಿ ಹಾಗೂ ಕಮ್ತೀಯಾರ್ ಬೆಟ್ಟು ಹೋದ್ರಾಳಿಯ ಮಹಿಳಾ ಸೇವಾ ಸಂಘದ ವತಿಯಿಂದ ಬಂಡಿಕಡು ಬೊಬ್ಬರ್ಯ ದೇವಸ್ಥಾನದ ವರ್ಧಂತ್ಯೋತ್ಸವ ನಡೆಯಿತು.</p>.<p>ದೇವಸ್ಥಾನಕ್ಕೆ ಭೇಟಿ ನೀಡಿದ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಅವರಿಗೆ ಮನವಿ ಸಲ್ಲಿಸಿದ ಬಂಡಿಕಡು ಬೊಬ್ಬರ್ಯ ಸೇವಾ ಸಮಿತಿಯ ಪ್ರಮುಖರು ದೇವಸ್ಥಾನಕ್ಕೆ ಸಮರ್ಪಕ ರಸ್ತೆ ಸಂಪರ್ಕ ಕಲ್ಪಿಸುವಂತೆ ಕೋರಿದರು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ಶಾಸಕರು ರಸ್ತೆ ನಿರ್ಮಾಣಕ್ಕೆ ಖಾಸಗಿ ಜಾಗದ ಅವಶ್ಯಕತೆ ಇರುವುದರಿಂದ ಮಾತುಕತೆ ನಡೆಸಬೇಕಾಗಿದೆ. ಇದಾದ ಬಳಿಕ ಸರ್ಕಾರದ ಅನುದಾನ ತರುವ ಪ್ರಯತ್ನ ಮಾಡಲಾಗುವುದು ಎಂದರು.</p>.<p>ಬಂಡಿಕಡು ಬೊಬ್ಬರ್ಯ ದೇವಸ್ಥಾನ ಸೇವಾ ಸಮಿತಿ ಗೌರವಾಧ್ಯಕ್ಷ ಶ್ರೀಧರ್ ಎಂ ಮೊಗವೀರ, ಅಧ್ಯಕ್ಷ ಬಸವರಾಜ್, ಕಾರ್ಯದರ್ಶಿ ಜಗನ್ನಾಥ್, ಬೀಜಾಡಿ ಗ್ರಾಮ ಪಂಚಾಯಿತ ಸದಸ್ಯರಾದ ವಿಶ್ವನಾಥ ಮೊಗವೀರ, ಪೂರ್ಣಿಮಾ, ಪ್ರಸನ್ನ ದೇವಾಡಿಗ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>