<p><strong>ಕುಂದಾಪುರ:</strong> ‘ಗಣಿತ, ಸಂಖ್ಯಾಶಾಸ್ತ್ರ ಕಬ್ಬಿಣದ ಕಡಲೆಯಂತೆ ಎಂಬ ತಪ್ಪು ಗ್ರಹಿಕೆ ವಿದ್ಯಾರ್ಥಿಗಳಲ್ಲಿದೆ. ಯುವ ಪೀಳಿಗೆಗೆ ಎಲ್ಲಾ ಸಂದರ್ಭಗಳಲ್ಲಿಯೂ ಅನೇಕ ವ್ಯವಹಾರಗಳಲ್ಲಿ ಮತ್ತು ಸಂವಹನಗಳಲ್ಲಿ ಸಂಖ್ಯಾಶಾಸ್ತ್ರ ಅವಶ್ಯಕವಾಗಿದೆ’ ಎಂದು ಉಡುಪಿ ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಾರುತಿ ಅಭಿಪ್ರಾಯಪಟ್ಟರು.</p>.<p>ಇಲ್ಲಿನ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಉಡುಪಿ ಜಿಲ್ಲಾ ಪದವಿಪೂರ್ವ ಕಾಲೇಜು ಸಂಖ್ಯಾಶಾಸ್ತ್ರ ಉಪನ್ಯಾಸಕರ ವೇದಿಕೆ ಆಶ್ರಯದಲ್ಲಿ ಸಂಖ್ಯಾಶಾಸ್ತ್ರ ಬೋಧಕರಿಗಾಗಿ ಏರ್ಪಡಿಸಿದ್ದ ‘ಒಂದು ದಿನದ ಬೋಧನಾ ಕೌಶಲ ಪುನಃಶ್ಚೇತನ ಕಾರ್ಯಾಗಾರ’ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ರಾಜ್ಯದ ಸರ್ಕಾರಿ, ಅನುದಾನಿತ ಕಾಲೇಜುಗಳಲ್ಲಿ ಸಂಖ್ಯಾಶಾಸ್ತ್ರ ಸಂಯೋಜನೆ ಅವಶ್ಯಕತೆಯಿದೆ. ಇಡೀ ಜಗತ್ತಿನ ಆರ್ಥಿಕ ಬಲವರ್ಧನೆಯ ಅಧ್ಯಯನ ಕೂಡಾ ಇದರಿಂದಲೇ ಸಾಧ್ಯವಾಗಿರುವುದರಿಂದ ಸಂಖ್ಯಾಶಾಸ್ತ್ರ ರಾಷ್ಟ್ರದ ಅಭ್ಯುದಯದ ಪ್ರತೀಕವಾಗಿದೆ ಎಂದರು.</p>.<p>ಪ್ರಾಚಾರ್ಯ ರಾಮಕೃಷ್ಣ ಬಿ.ಜಿ ಅಧ್ಯಕ್ಷತೆ ವಹಿಸಿದ್ದರು. ಪ್ರೊ. ರಾಜಮೋಹನ್ ಹಾಗೂ ಪ್ರೊ. ವಿಷ್ಣುಮೂರ್ತಿ ಉಪಾಧ್ಯಾಯ ಮಾತನಾಡಿದರು. ಪ್ರೊ.ಗಣೇಶ ಕೆ., ‘ಆರ್-ಪ್ರೊಗ್ರಾಮಿಂಗ್’ ವಿಷಯವಾಗಿ ಮತ್ತು ಪ್ರೊ.ಪ್ರಭಾಕರ ಶೆಟ್ಟಿಗಾರ, ‘ಪ್ರಶ್ನೆ ಪತ್ರಿಕೆಯ ನೀಲನಕ್ಷೆಯ’ ಕುರಿತು ಮಾಹಿತಿ ನೀಡಿದರು.</p>.<p>ವೈಭವಿ ಮತ್ತು ತಂಡದವರು ಪ್ರಾರ್ಥಿಸಿದರು. ಪ್ರೊ. ಪ್ರಭಾಕರ ಶೆಟ್ಟಿಗಾರ ಸ್ವಾಗತಿಸಿದರು. ನೇತ್ರಾವತಿ ಬುಡ್ಡಿ ವಂದಿಸಿದರು. ಶಿಲ್ಪಾ ನಿರೂಪಿಸಿದರು. ಕಾರ್ಯಾಗಾರದಲ್ಲಿ 45 ಜನ ಉಪನ್ಯಾಸಕರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಂದಾಪುರ:</strong> ‘ಗಣಿತ, ಸಂಖ್ಯಾಶಾಸ್ತ್ರ ಕಬ್ಬಿಣದ ಕಡಲೆಯಂತೆ ಎಂಬ ತಪ್ಪು ಗ್ರಹಿಕೆ ವಿದ್ಯಾರ್ಥಿಗಳಲ್ಲಿದೆ. ಯುವ ಪೀಳಿಗೆಗೆ ಎಲ್ಲಾ ಸಂದರ್ಭಗಳಲ್ಲಿಯೂ ಅನೇಕ ವ್ಯವಹಾರಗಳಲ್ಲಿ ಮತ್ತು ಸಂವಹನಗಳಲ್ಲಿ ಸಂಖ್ಯಾಶಾಸ್ತ್ರ ಅವಶ್ಯಕವಾಗಿದೆ’ ಎಂದು ಉಡುಪಿ ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಾರುತಿ ಅಭಿಪ್ರಾಯಪಟ್ಟರು.</p>.<p>ಇಲ್ಲಿನ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಉಡುಪಿ ಜಿಲ್ಲಾ ಪದವಿಪೂರ್ವ ಕಾಲೇಜು ಸಂಖ್ಯಾಶಾಸ್ತ್ರ ಉಪನ್ಯಾಸಕರ ವೇದಿಕೆ ಆಶ್ರಯದಲ್ಲಿ ಸಂಖ್ಯಾಶಾಸ್ತ್ರ ಬೋಧಕರಿಗಾಗಿ ಏರ್ಪಡಿಸಿದ್ದ ‘ಒಂದು ದಿನದ ಬೋಧನಾ ಕೌಶಲ ಪುನಃಶ್ಚೇತನ ಕಾರ್ಯಾಗಾರ’ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ರಾಜ್ಯದ ಸರ್ಕಾರಿ, ಅನುದಾನಿತ ಕಾಲೇಜುಗಳಲ್ಲಿ ಸಂಖ್ಯಾಶಾಸ್ತ್ರ ಸಂಯೋಜನೆ ಅವಶ್ಯಕತೆಯಿದೆ. ಇಡೀ ಜಗತ್ತಿನ ಆರ್ಥಿಕ ಬಲವರ್ಧನೆಯ ಅಧ್ಯಯನ ಕೂಡಾ ಇದರಿಂದಲೇ ಸಾಧ್ಯವಾಗಿರುವುದರಿಂದ ಸಂಖ್ಯಾಶಾಸ್ತ್ರ ರಾಷ್ಟ್ರದ ಅಭ್ಯುದಯದ ಪ್ರತೀಕವಾಗಿದೆ ಎಂದರು.</p>.<p>ಪ್ರಾಚಾರ್ಯ ರಾಮಕೃಷ್ಣ ಬಿ.ಜಿ ಅಧ್ಯಕ್ಷತೆ ವಹಿಸಿದ್ದರು. ಪ್ರೊ. ರಾಜಮೋಹನ್ ಹಾಗೂ ಪ್ರೊ. ವಿಷ್ಣುಮೂರ್ತಿ ಉಪಾಧ್ಯಾಯ ಮಾತನಾಡಿದರು. ಪ್ರೊ.ಗಣೇಶ ಕೆ., ‘ಆರ್-ಪ್ರೊಗ್ರಾಮಿಂಗ್’ ವಿಷಯವಾಗಿ ಮತ್ತು ಪ್ರೊ.ಪ್ರಭಾಕರ ಶೆಟ್ಟಿಗಾರ, ‘ಪ್ರಶ್ನೆ ಪತ್ರಿಕೆಯ ನೀಲನಕ್ಷೆಯ’ ಕುರಿತು ಮಾಹಿತಿ ನೀಡಿದರು.</p>.<p>ವೈಭವಿ ಮತ್ತು ತಂಡದವರು ಪ್ರಾರ್ಥಿಸಿದರು. ಪ್ರೊ. ಪ್ರಭಾಕರ ಶೆಟ್ಟಿಗಾರ ಸ್ವಾಗತಿಸಿದರು. ನೇತ್ರಾವತಿ ಬುಡ್ಡಿ ವಂದಿಸಿದರು. ಶಿಲ್ಪಾ ನಿರೂಪಿಸಿದರು. ಕಾರ್ಯಾಗಾರದಲ್ಲಿ 45 ಜನ ಉಪನ್ಯಾಸಕರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>