<p>ಕುಂದಾಪುರ: ನಗರದ ಬೋರ್ಡ್ ಹೈಸ್ಕೂಲ್ ಪಕ್ಕದಲ್ಲಿರುವ ಪುರಸಭೆಗೆ ಸೇರಿದ ಜಾಗ ಸರ್ವೆ ನಂಬರ್ 141: 1ಸಿ 1ಎ ಪ್ರದೇಶದ ಸರ್ಕಾರಿ ಜಾಗವನ್ನು ಕಾಂಗ್ರೆಸ್ ಕಚೇರಿ ನಿರ್ಮಾಣಕ್ಕೆ ಮಂಜೂರು ಮಾಡಿರುವ ಸರ್ಕಾರದ ತೀರ್ಮಾನ ಖಂಡನೀಯ ಎಂದು ಸಿಪಿಎಂ ಮುಖಂಡರು ಹೇಳಿದ್ದಾರೆ.</p>.<p>ಈ ಸಂಬಂಧ ಅವರು ಉಪ ವಿಭಾಗಾಧಿಕಾರಿ ಎಸ್.ಆರ್.ರಶ್ಮಿ ಅವರಿಗೆ ಮನವಿ ಸಲ್ಲಿಸಿದರು.</p>.<p>ಈಗಾಗಲೇ ಈ ಜಾಗ ಗೂಡ್ಸ್ ಟೆಂಪೊ ನಿಲ್ದಾಣವಾಗಿ ಬಳಕೆ ಆಗುತ್ತಿದೆ. ಹಿಂದೆಯೂ ಈ ಜಾಗವನ್ನು ಬೇರೆ ರಾಜಕೀಯ ಪಕ್ಷಗಳಿಗೆ ನೀಡುವ ಪ್ರಸ್ತಾವ ಇತ್ತು. ಆಗಲೂ ಆಕ್ಷೇಪ ವ್ಯಕ್ತವಾಗಿತ್ತು. ಪರಿಶೀಲನೆ ನಡೆಸಿದ್ದ ಕಂದಾಯ ನಿರೀಕ್ಷಕರು, ಈ ಪ್ರದೇಶವು ಪೊರಂಬೋಕು ರಸ್ತೆ ತೋಡು ಆಗಿರುವುದರಿಂದ ರಾಜಕೀಯ ಪಕ್ಷಗಳಿಗೆ ಮಂಜೂರಾತಿಗೆ ಅವಕಾಶ ಇಲ್ಲ ಎಂಬುದಾಗಿ ವರದಿ ನೀಡಿದ್ದರು.</p>.<p>ಈ ಜಾಗವನ್ನು ಸರಕು ಸಾಗಣೆಯ ಆಟೊ ನಿಲ್ದಾಣವಾಗಿ ಗುರುತಿಸಲು 2000ನೇ ಇಸವಿಯಲ್ಲಿ ಪುರಸಭೆ, ಜಿಲ್ಲಾಧಿಕಾರಿ ಒಪ್ಪಿಗೆಗೆ ಪ್ರಸ್ತಾವ ಸಲ್ಲಿಸಿತ್ತು. ಸಾರ್ವಜನಿಕ ಉಪಯೋಗಕ್ಕೆ ಪುರಸಭೆ ವ್ಯಾಪ್ತಿಯಲ್ಲಿ ಯಾವುದೇ ಸ್ಥಳ ಇಲ್ಲದಿರುವಾಗ ಇರುವ ಈ ಜಾಗವನ್ನು ರಾಜಕೀಯ ಪಕ್ಷದ ಕಚೇರಿಗೆ ನೀಡುವುದಕ್ಕೆ ನಮ್ಮ ಆಕ್ಷೇಪವಿದೆ. 2000ನೇ ಇಸವಿಯ ಪುರಸಭೆ ತೀರ್ಮಾನದಂತೆ ಈ ಸ್ಥಳವನ್ನು ಗೂಡ್ಸ್ ಆಟೊ, ಟೆಂಟೊ ನಿಲ್ದಾಣಕ್ಕೆ ಕಾಯ್ದಿರಿಸಬೇಕು. ಉಪ ವಿಭಾಗಾಧಿಕಾರಿ, ಈ ತೀರ್ಮಾನವನ್ನು ಮರು ಪರಿಶೀಲಿಸಿ ಸ್ಥಳವನ್ನು ಸಾರ್ವಜನಿಕ ಉಪಯೋಗಕ್ಕೆ ಮೀಸಲಿಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.</p>.<p>ಸಿಪಿಎಂ ಮುಖಂಡರಾದ ವಿ.ನರಸಿಂಹ, ಸುರೇಶ್ ಕಲ್ಲಾಗರ, ಎಚ್.ನರಸಿಂಹ, ವಿ.ಚಂದ್ರಶೇಖರ್, ಆಟೊ ಸಂಘದ ಮುಖಂಡ ರಾಜು ದೇವಾಡಿಗ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-28-588390306</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕುಂದಾಪುರ: ನಗರದ ಬೋರ್ಡ್ ಹೈಸ್ಕೂಲ್ ಪಕ್ಕದಲ್ಲಿರುವ ಪುರಸಭೆಗೆ ಸೇರಿದ ಜಾಗ ಸರ್ವೆ ನಂಬರ್ 141: 1ಸಿ 1ಎ ಪ್ರದೇಶದ ಸರ್ಕಾರಿ ಜಾಗವನ್ನು ಕಾಂಗ್ರೆಸ್ ಕಚೇರಿ ನಿರ್ಮಾಣಕ್ಕೆ ಮಂಜೂರು ಮಾಡಿರುವ ಸರ್ಕಾರದ ತೀರ್ಮಾನ ಖಂಡನೀಯ ಎಂದು ಸಿಪಿಎಂ ಮುಖಂಡರು ಹೇಳಿದ್ದಾರೆ.</p>.<p>ಈ ಸಂಬಂಧ ಅವರು ಉಪ ವಿಭಾಗಾಧಿಕಾರಿ ಎಸ್.ಆರ್.ರಶ್ಮಿ ಅವರಿಗೆ ಮನವಿ ಸಲ್ಲಿಸಿದರು.</p>.<p>ಈಗಾಗಲೇ ಈ ಜಾಗ ಗೂಡ್ಸ್ ಟೆಂಪೊ ನಿಲ್ದಾಣವಾಗಿ ಬಳಕೆ ಆಗುತ್ತಿದೆ. ಹಿಂದೆಯೂ ಈ ಜಾಗವನ್ನು ಬೇರೆ ರಾಜಕೀಯ ಪಕ್ಷಗಳಿಗೆ ನೀಡುವ ಪ್ರಸ್ತಾವ ಇತ್ತು. ಆಗಲೂ ಆಕ್ಷೇಪ ವ್ಯಕ್ತವಾಗಿತ್ತು. ಪರಿಶೀಲನೆ ನಡೆಸಿದ್ದ ಕಂದಾಯ ನಿರೀಕ್ಷಕರು, ಈ ಪ್ರದೇಶವು ಪೊರಂಬೋಕು ರಸ್ತೆ ತೋಡು ಆಗಿರುವುದರಿಂದ ರಾಜಕೀಯ ಪಕ್ಷಗಳಿಗೆ ಮಂಜೂರಾತಿಗೆ ಅವಕಾಶ ಇಲ್ಲ ಎಂಬುದಾಗಿ ವರದಿ ನೀಡಿದ್ದರು.</p>.<p>ಈ ಜಾಗವನ್ನು ಸರಕು ಸಾಗಣೆಯ ಆಟೊ ನಿಲ್ದಾಣವಾಗಿ ಗುರುತಿಸಲು 2000ನೇ ಇಸವಿಯಲ್ಲಿ ಪುರಸಭೆ, ಜಿಲ್ಲಾಧಿಕಾರಿ ಒಪ್ಪಿಗೆಗೆ ಪ್ರಸ್ತಾವ ಸಲ್ಲಿಸಿತ್ತು. ಸಾರ್ವಜನಿಕ ಉಪಯೋಗಕ್ಕೆ ಪುರಸಭೆ ವ್ಯಾಪ್ತಿಯಲ್ಲಿ ಯಾವುದೇ ಸ್ಥಳ ಇಲ್ಲದಿರುವಾಗ ಇರುವ ಈ ಜಾಗವನ್ನು ರಾಜಕೀಯ ಪಕ್ಷದ ಕಚೇರಿಗೆ ನೀಡುವುದಕ್ಕೆ ನಮ್ಮ ಆಕ್ಷೇಪವಿದೆ. 2000ನೇ ಇಸವಿಯ ಪುರಸಭೆ ತೀರ್ಮಾನದಂತೆ ಈ ಸ್ಥಳವನ್ನು ಗೂಡ್ಸ್ ಆಟೊ, ಟೆಂಟೊ ನಿಲ್ದಾಣಕ್ಕೆ ಕಾಯ್ದಿರಿಸಬೇಕು. ಉಪ ವಿಭಾಗಾಧಿಕಾರಿ, ಈ ತೀರ್ಮಾನವನ್ನು ಮರು ಪರಿಶೀಲಿಸಿ ಸ್ಥಳವನ್ನು ಸಾರ್ವಜನಿಕ ಉಪಯೋಗಕ್ಕೆ ಮೀಸಲಿಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.</p>.<p>ಸಿಪಿಎಂ ಮುಖಂಡರಾದ ವಿ.ನರಸಿಂಹ, ಸುರೇಶ್ ಕಲ್ಲಾಗರ, ಎಚ್.ನರಸಿಂಹ, ವಿ.ಚಂದ್ರಶೇಖರ್, ಆಟೊ ಸಂಘದ ಮುಖಂಡ ರಾಜು ದೇವಾಡಿಗ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-28-588390306</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>