<p>ಕುಂದಾಪುರ: ಸೇತುವೆ ಸಹಿತ ಕಿಂಡಿ ಅಣೆಕಟ್ಟೆ, ಉಪ್ಪುನೀರಿನ ತಡೆಗಾಗಿ ನಿರ್ಮಿಸಿರುವ ಕಿಂಡಿ ಅಣೆಕಟ್ಟೆಗಳ ನಿರ್ವಹಣೆಗಾಗಿ ವರ್ಷಕ್ಕೆ ಸರ್ಕಾರ ₹20 ಕೋಟಿ ಖರ್ಚು ಮಾಡುತ್ತಿದೆ. 5 ವರ್ಷದ ಅವಧಿಗೆ ನಿರ್ವಹಣೆಯ ಟೆಂಡರ್ ನೀಡಲಾಗುತ್ತದೆ. ಇಲಾಖೆ ಇದನ್ನು ಕಾಲಕಾಲಕ್ಕೆ ಪರಿಶೀಲಿಸುತ್ತದೆ. ತಪ್ಪು ಕಂಡುಬಂದಲ್ಲಿ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡುವ ಬಗ್ಗೆ ತಿಳಿಸಲಾಗಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜು ಹೇಳಿದರು.</p>.<p>ಬುಧವಾರ ಇಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ‘ನಮ್ಮ ಇಲಾಖೆಗೆ ವರ್ಷಕ್ಕೆ ₹50 ಕೋಟಿ ಅನುದಾನ ಬಿಡುಗಡೆಯಾಗುತ್ತದೆ. ತಡೆಗೋಡೆ ನಿರ್ಮಾಣಕ್ಕೆ ನೂರಾರು ಅರ್ಜಿಗಳು ಬರುತ್ತವೆ. ಸಾರ್ವಜನಿಕರ ಅಗತ್ಯ ಪರಿಗಣಿಸಿ, ಯೋಜನೆ ರೂಪಿಸಲಾಗುತ್ತದೆ. ಕರಾವಳಿ ಭಾಗದ ನದಿ ಕೊರೆತ ತಡೆಗಟ್ಟುವ ತಡೆಗೋಡೆ ನಿರ್ಮಾಣಕ್ಕೂ ಅನುದಾನ ನೀಡಲು ಪ್ರಯತ್ನಿಸಲಾಗುವುದು ಎಂದರು.</p>.<p>‘ಅಂತರ್ಜಲ ಮಟ್ಟ ಹೆಚ್ಚಿಸಲು ಹಾಗೂ ನೀರಿನ ಸಮೃದ್ಧತೆ ಹೆಚ್ಚಿಸುವ ನದಿಗಳ ಜೋಡಣೆ ಯೋಜನೆ ಬಗ್ಗೆ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು. ಈಗಾಗಲೇ ಇಲಾಖೆಯಿಂದ ಅನೇಕ ಬಾರಿ ಕೇಂದ್ರ ಜಲಶಕ್ತಿ ಇಲಾಖೆಗೆ ಮನವಿ ಸಲ್ಲಿಸಿದ್ದೇವೆ. ಕೇಂದ್ರ ಸಚಿವ ವಿ.ಸೋಮಣ್ಣ ಅವರನ್ನು ಭೇಟಿ ಮಾಡಿ ರಾಜ್ಯದ ಯೋಜನೆಗೆ ಅನುದಾನ ಒದಗಿಸುವ ಕುರಿತು ಚರ್ಚಿಸಲಾಗಿದೆ. ಅವರು ಪೂರಕವಾಗಿ ಸ್ಪಂದಿಸಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ ಅವರ ಜತೆಗೂಡಿ ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿಯಾಗಿ ರಾಜ್ಯಕ್ಕೆ ಅನುದಾನ ನೀಡುವ ಕುರಿತು ಮನವರಿಕೆ ಮಾಡಲಾಗಿದೆ. ರಾಜ್ಯದಿಂದ ₹3,200 ಕೋಟಿ ವೆಚ್ಚದ ಪ್ರಸ್ತಾವ ಸಲ್ಲಿಸಲಾಗಿದೆ. ಈವರೆಗೆ ಯಾವುದೇ ಅನುದಾನವೂ ಬಂದಿಲ್ಲ, ಯಾವ ಯೋಜನೆಗೂ ಮಂಜೂರಾತಿ ದೊರಕಿಲ್ಲ’ ಎಂದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-28-1718823765</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕುಂದಾಪುರ: ಸೇತುವೆ ಸಹಿತ ಕಿಂಡಿ ಅಣೆಕಟ್ಟೆ, ಉಪ್ಪುನೀರಿನ ತಡೆಗಾಗಿ ನಿರ್ಮಿಸಿರುವ ಕಿಂಡಿ ಅಣೆಕಟ್ಟೆಗಳ ನಿರ್ವಹಣೆಗಾಗಿ ವರ್ಷಕ್ಕೆ ಸರ್ಕಾರ ₹20 ಕೋಟಿ ಖರ್ಚು ಮಾಡುತ್ತಿದೆ. 5 ವರ್ಷದ ಅವಧಿಗೆ ನಿರ್ವಹಣೆಯ ಟೆಂಡರ್ ನೀಡಲಾಗುತ್ತದೆ. ಇಲಾಖೆ ಇದನ್ನು ಕಾಲಕಾಲಕ್ಕೆ ಪರಿಶೀಲಿಸುತ್ತದೆ. ತಪ್ಪು ಕಂಡುಬಂದಲ್ಲಿ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡುವ ಬಗ್ಗೆ ತಿಳಿಸಲಾಗಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜು ಹೇಳಿದರು.</p>.<p>ಬುಧವಾರ ಇಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ‘ನಮ್ಮ ಇಲಾಖೆಗೆ ವರ್ಷಕ್ಕೆ ₹50 ಕೋಟಿ ಅನುದಾನ ಬಿಡುಗಡೆಯಾಗುತ್ತದೆ. ತಡೆಗೋಡೆ ನಿರ್ಮಾಣಕ್ಕೆ ನೂರಾರು ಅರ್ಜಿಗಳು ಬರುತ್ತವೆ. ಸಾರ್ವಜನಿಕರ ಅಗತ್ಯ ಪರಿಗಣಿಸಿ, ಯೋಜನೆ ರೂಪಿಸಲಾಗುತ್ತದೆ. ಕರಾವಳಿ ಭಾಗದ ನದಿ ಕೊರೆತ ತಡೆಗಟ್ಟುವ ತಡೆಗೋಡೆ ನಿರ್ಮಾಣಕ್ಕೂ ಅನುದಾನ ನೀಡಲು ಪ್ರಯತ್ನಿಸಲಾಗುವುದು ಎಂದರು.</p>.<p>‘ಅಂತರ್ಜಲ ಮಟ್ಟ ಹೆಚ್ಚಿಸಲು ಹಾಗೂ ನೀರಿನ ಸಮೃದ್ಧತೆ ಹೆಚ್ಚಿಸುವ ನದಿಗಳ ಜೋಡಣೆ ಯೋಜನೆ ಬಗ್ಗೆ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು. ಈಗಾಗಲೇ ಇಲಾಖೆಯಿಂದ ಅನೇಕ ಬಾರಿ ಕೇಂದ್ರ ಜಲಶಕ್ತಿ ಇಲಾಖೆಗೆ ಮನವಿ ಸಲ್ಲಿಸಿದ್ದೇವೆ. ಕೇಂದ್ರ ಸಚಿವ ವಿ.ಸೋಮಣ್ಣ ಅವರನ್ನು ಭೇಟಿ ಮಾಡಿ ರಾಜ್ಯದ ಯೋಜನೆಗೆ ಅನುದಾನ ಒದಗಿಸುವ ಕುರಿತು ಚರ್ಚಿಸಲಾಗಿದೆ. ಅವರು ಪೂರಕವಾಗಿ ಸ್ಪಂದಿಸಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ ಅವರ ಜತೆಗೂಡಿ ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿಯಾಗಿ ರಾಜ್ಯಕ್ಕೆ ಅನುದಾನ ನೀಡುವ ಕುರಿತು ಮನವರಿಕೆ ಮಾಡಲಾಗಿದೆ. ರಾಜ್ಯದಿಂದ ₹3,200 ಕೋಟಿ ವೆಚ್ಚದ ಪ್ರಸ್ತಾವ ಸಲ್ಲಿಸಲಾಗಿದೆ. ಈವರೆಗೆ ಯಾವುದೇ ಅನುದಾನವೂ ಬಂದಿಲ್ಲ, ಯಾವ ಯೋಜನೆಗೂ ಮಂಜೂರಾತಿ ದೊರಕಿಲ್ಲ’ ಎಂದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-28-1718823765</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>