<p>ಕುಂದಾಪುರ: ‘ಸಂವಿಧಾನ ಶಿಲ್ಪಿ ಅಂಬೇಡ್ಕರ್ ಹಾಗು ಬ್ರಹ್ಮಶ್ರೀ ನಾರಾಯಣ ಗುರು ಹಿಂದುಳಿದ ವರ್ಗದವರ ದನಿಯಾಗಿದ್ದರು. ಶಿಕ್ಷಣದಿಂದ ಮಾತ್ರ ಎಲ್ಲವನ್ನೂ ಸಾಧಿಸಬಹುದು ಎನ್ನುವ ಸಂದೇಶ ನೀಡಿದವರು’ ಎಂದು ತಾಲ್ಲೂಕು ಬಿಲ್ಲವ ಸೇವಾ ಸಂಘದ ಅಧ್ಯಕ್ಷ ಅಶೋಕ್ ಪೂಜಾರಿ ಬೀಜಾಡಿ ಹೇಳಿದರು.</p>.<p>ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ತಾಲ್ಲೂಕು ಸಮಿತಿ ಆಶ್ರಯದಲ್ಲಿ ಮಂಗಳವಾರ ಅಂಬೇಡ್ಕರ್ ಭವನದಲ್ಲಿ ನಡೆದ ಅಂಬೇಡ್ಕರ್ ಜನ್ಮದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ದಲಿತ ಸಂಘರ್ಷ ಸಮಿತಿ ತಾಲ್ಲೂಕು ಸಮಿತಿ ಪ್ರಧಾನ ಸಂಚಾಲಕ ಕೆ.ಸಿ. ರಾಜು ಬೆಟ್ಟಿನಮನೆ ಅಧ್ಯಕ್ಷತೆ ವಹಿಸಿದ್ದರು. ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ವಿನೋದ್ ಕ್ರಾಸ್ಟೊ, ಜಿಲ್ಲಾ ಸಿಐಟಿ ಮುಖಂಡ ವಿ. ಚಂದ್ರಶೇಖರ್ ಮಾತನಾಡಿದರು.</p>.<p>ಪ್ರಮುಖರಾದ ಸುರೇಶ್ ಹಕ್ಲಾಡಿ, ಸತೀಶ್ ಕಂಚುಗೋಡು, ನಾರಾಯಣ ಬೀಜಾಡಿ, ಭೋಜರಾಜ ಕೆ. ಭಾಗವಹಿಸಿದ್ದರು. ಚಂದ್ರ ಕೊರ್ಗಿ ಸ್ವಾಗತಿಸಿದರು. ಉದಯ ಕೊಳೂರು ವಂದಿಸಿದರು. ರವಿ ಬನ್ನಾಡಿ ನಿರೂಪಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260415-28-730982270</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕುಂದಾಪುರ: ‘ಸಂವಿಧಾನ ಶಿಲ್ಪಿ ಅಂಬೇಡ್ಕರ್ ಹಾಗು ಬ್ರಹ್ಮಶ್ರೀ ನಾರಾಯಣ ಗುರು ಹಿಂದುಳಿದ ವರ್ಗದವರ ದನಿಯಾಗಿದ್ದರು. ಶಿಕ್ಷಣದಿಂದ ಮಾತ್ರ ಎಲ್ಲವನ್ನೂ ಸಾಧಿಸಬಹುದು ಎನ್ನುವ ಸಂದೇಶ ನೀಡಿದವರು’ ಎಂದು ತಾಲ್ಲೂಕು ಬಿಲ್ಲವ ಸೇವಾ ಸಂಘದ ಅಧ್ಯಕ್ಷ ಅಶೋಕ್ ಪೂಜಾರಿ ಬೀಜಾಡಿ ಹೇಳಿದರು.</p>.<p>ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ತಾಲ್ಲೂಕು ಸಮಿತಿ ಆಶ್ರಯದಲ್ಲಿ ಮಂಗಳವಾರ ಅಂಬೇಡ್ಕರ್ ಭವನದಲ್ಲಿ ನಡೆದ ಅಂಬೇಡ್ಕರ್ ಜನ್ಮದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ದಲಿತ ಸಂಘರ್ಷ ಸಮಿತಿ ತಾಲ್ಲೂಕು ಸಮಿತಿ ಪ್ರಧಾನ ಸಂಚಾಲಕ ಕೆ.ಸಿ. ರಾಜು ಬೆಟ್ಟಿನಮನೆ ಅಧ್ಯಕ್ಷತೆ ವಹಿಸಿದ್ದರು. ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ವಿನೋದ್ ಕ್ರಾಸ್ಟೊ, ಜಿಲ್ಲಾ ಸಿಐಟಿ ಮುಖಂಡ ವಿ. ಚಂದ್ರಶೇಖರ್ ಮಾತನಾಡಿದರು.</p>.<p>ಪ್ರಮುಖರಾದ ಸುರೇಶ್ ಹಕ್ಲಾಡಿ, ಸತೀಶ್ ಕಂಚುಗೋಡು, ನಾರಾಯಣ ಬೀಜಾಡಿ, ಭೋಜರಾಜ ಕೆ. ಭಾಗವಹಿಸಿದ್ದರು. ಚಂದ್ರ ಕೊರ್ಗಿ ಸ್ವಾಗತಿಸಿದರು. ಉದಯ ಕೊಳೂರು ವಂದಿಸಿದರು. ರವಿ ಬನ್ನಾಡಿ ನಿರೂಪಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260415-28-730982270</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>