<p>ಕುಂದಾಪುರ: ಅಭಿವೃದ್ಧಿ ಕುರಿತಾದ ಚರ್ಚೆ ನಡೆಯಬೇಕಾದ ಜಿಲ್ಲಾ ಮಟ್ಟದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಗಳಲ್ಲಿ ಶಿಷ್ಟಾಚಾರದ ಕುರಿತು ಚರ್ಚೆ ಮಾಡುವುದು ಸರಿಯಲ್ಲ ಎಂದು ಮುಖಂಡ ಕೆ.ಜಯಪ್ರಕಾಶ್ ಹೆಗ್ಡೆ ತಿಳಿಸಿದ್ದಾರೆ.</p>.<p>ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಮೂರು ತಿಂಗಳಿಗೊಮ್ಮೆ ನಡೆಯುವ ಪ್ರಗತಿ ಪರಿಶೀಲನಾ ಸಭೆ (ಕೆಡಿಪಿ)ಯಲ್ಲಿ ಇಲಾಖಾವಾರು ಚರ್ಚೆ ಮಾಡಲು ಸಾಕಷ್ಟು ವಿಚಾರಗಳಿರುತ್ತವೆ. ಈ ಸಭೆಯಲ್ಲಿ ಸರ್ಕಾರದ ವಿವಿಧ ಇಲಾಖೆಯ ಜಿಲ್ಲಾ ವ್ಯಾಪ್ತಿಯ ಸಮಸ್ಯೆ ಹಾಗೂ ಪ್ರಗತಿಯ ಬಗ್ಗೆ ಚರ್ಚೆ, ಸಮಾಲೋಚನೆ, ಪರಿಶೀಲನೆ, ಸಲಹೆ ಹಾಗೂ ತೀರ್ಮಾನಗಳು ನಡೆಯಬೇಕು ಎನ್ನುವ ನಿರ್ದಿಷ್ಟ ಕಾರ್ಯಸೂಚಿಗಳಿರುತ್ತದೆ. ಅಮೂಲ್ಯವಾದ ಈ ಸಭೆಯಲ್ಲಿ ಕೇವಲ ಅಭಿವೃದ್ಧಿ ಹಾಗೂ ಜನಪರ ವಿಚಾರಗಳ ಕುರಿತು ಮಾತ್ರ ಚರ್ಚೆಗಳು ನಡೆಯಬೇಕು ಎಂದು ಹೇಳಿದ್ದಾರೆ.</p>.<p>ಜನಪ್ರತಿನಿಧಿಗಳು ಶಿಷ್ಟಾಚಾರ ಅಪೇಕ್ಷೆ ಮಾಡುವುದು ಹಾಗೂ ಅಧಿಕಾರಿಗಳು ಶಿಷ್ಟಾಚಾರ ಪಾಲನೆ ಮಾಡದೇ ಇದ್ದಾಗ ಆಕ್ಷೇಪ ದಾಖಲಿಸುವುದು ತಪ್ಪಲ್ಲ. ಆದರೆ ಇದಕ್ಕಾಗಿ ನಿರ್ದಿಷ್ಟ ಕಾರ್ಯಸೂಚಿಯಂತೆ ನಡೆಯಬೇಕಾದ ಈ ಸಭೆಗಳನ್ನು ಬಳಕೆ ಮಾಡಿಕೊಳ್ಳುವುದು ಮಾತ್ರ ಸರಿಯಲ್ಲ. ಜನಪ್ರತಿನಿಧಿಗಳ ಗೌರವಕ್ಕೆ ಚ್ಯುತಿಯಾದಾಗ ಜಿಲ್ಲಾಧಿಕಾರಿಗಳೊಂದಿಗೆ ಕೂತು ಮಾತನಾಡಿ ಪರಿಹಾರ ಕಂಡುಕೊಳ್ಳುವುದು ಸೂಕ್ತ. ಕೆಡಿಪಿಯಂತಹ ಜನಪರ ಹಾಗೂ ಅಭಿವೃದ್ಧಿ ಪರ ಚರ್ಚೆ ನಡೆಯಬೇಕಾದ ಸಭೆಗಳು, ಈ ರೀತಿಯ ಅನಗತ್ಯ ಚರ್ಚೆಗಳಿಗೆ ವೇದಿಕೆಯಾಗಬಾರದು ಎಂದು ಹೇಳಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260524-28-1336732735</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕುಂದಾಪುರ: ಅಭಿವೃದ್ಧಿ ಕುರಿತಾದ ಚರ್ಚೆ ನಡೆಯಬೇಕಾದ ಜಿಲ್ಲಾ ಮಟ್ಟದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಗಳಲ್ಲಿ ಶಿಷ್ಟಾಚಾರದ ಕುರಿತು ಚರ್ಚೆ ಮಾಡುವುದು ಸರಿಯಲ್ಲ ಎಂದು ಮುಖಂಡ ಕೆ.ಜಯಪ್ರಕಾಶ್ ಹೆಗ್ಡೆ ತಿಳಿಸಿದ್ದಾರೆ.</p>.<p>ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಮೂರು ತಿಂಗಳಿಗೊಮ್ಮೆ ನಡೆಯುವ ಪ್ರಗತಿ ಪರಿಶೀಲನಾ ಸಭೆ (ಕೆಡಿಪಿ)ಯಲ್ಲಿ ಇಲಾಖಾವಾರು ಚರ್ಚೆ ಮಾಡಲು ಸಾಕಷ್ಟು ವಿಚಾರಗಳಿರುತ್ತವೆ. ಈ ಸಭೆಯಲ್ಲಿ ಸರ್ಕಾರದ ವಿವಿಧ ಇಲಾಖೆಯ ಜಿಲ್ಲಾ ವ್ಯಾಪ್ತಿಯ ಸಮಸ್ಯೆ ಹಾಗೂ ಪ್ರಗತಿಯ ಬಗ್ಗೆ ಚರ್ಚೆ, ಸಮಾಲೋಚನೆ, ಪರಿಶೀಲನೆ, ಸಲಹೆ ಹಾಗೂ ತೀರ್ಮಾನಗಳು ನಡೆಯಬೇಕು ಎನ್ನುವ ನಿರ್ದಿಷ್ಟ ಕಾರ್ಯಸೂಚಿಗಳಿರುತ್ತದೆ. ಅಮೂಲ್ಯವಾದ ಈ ಸಭೆಯಲ್ಲಿ ಕೇವಲ ಅಭಿವೃದ್ಧಿ ಹಾಗೂ ಜನಪರ ವಿಚಾರಗಳ ಕುರಿತು ಮಾತ್ರ ಚರ್ಚೆಗಳು ನಡೆಯಬೇಕು ಎಂದು ಹೇಳಿದ್ದಾರೆ.</p>.<p>ಜನಪ್ರತಿನಿಧಿಗಳು ಶಿಷ್ಟಾಚಾರ ಅಪೇಕ್ಷೆ ಮಾಡುವುದು ಹಾಗೂ ಅಧಿಕಾರಿಗಳು ಶಿಷ್ಟಾಚಾರ ಪಾಲನೆ ಮಾಡದೇ ಇದ್ದಾಗ ಆಕ್ಷೇಪ ದಾಖಲಿಸುವುದು ತಪ್ಪಲ್ಲ. ಆದರೆ ಇದಕ್ಕಾಗಿ ನಿರ್ದಿಷ್ಟ ಕಾರ್ಯಸೂಚಿಯಂತೆ ನಡೆಯಬೇಕಾದ ಈ ಸಭೆಗಳನ್ನು ಬಳಕೆ ಮಾಡಿಕೊಳ್ಳುವುದು ಮಾತ್ರ ಸರಿಯಲ್ಲ. ಜನಪ್ರತಿನಿಧಿಗಳ ಗೌರವಕ್ಕೆ ಚ್ಯುತಿಯಾದಾಗ ಜಿಲ್ಲಾಧಿಕಾರಿಗಳೊಂದಿಗೆ ಕೂತು ಮಾತನಾಡಿ ಪರಿಹಾರ ಕಂಡುಕೊಳ್ಳುವುದು ಸೂಕ್ತ. ಕೆಡಿಪಿಯಂತಹ ಜನಪರ ಹಾಗೂ ಅಭಿವೃದ್ಧಿ ಪರ ಚರ್ಚೆ ನಡೆಯಬೇಕಾದ ಸಭೆಗಳು, ಈ ರೀತಿಯ ಅನಗತ್ಯ ಚರ್ಚೆಗಳಿಗೆ ವೇದಿಕೆಯಾಗಬಾರದು ಎಂದು ಹೇಳಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260524-28-1336732735</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>