ಹಲವು ವರ್ಷಗಳಿಂದಲೂ ಪ್ರತಿ ಮಳೆಗಾಲದಲ್ಲಿ ಕಡಲ್ಕೊರೆತ ಸಮಸ್ಯೆಗಳು ಕಂಡು ಬರುತ್ತಿದ್ದು, ಸಮಸ್ಯೆ ಪರಿಹರಿಸುವಂತೆ ಹಲವು ಬಾರಿ ಜನಪ್ರತಿನಿಧಿಗಳ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ. ಕಿನಾರ ರೆಸ್ಟೋರೆಂಟ್ ಬಳಿ ಕಾಣಿಸಿಕೊಳ್ಳುವ ಕಡಲ್ಕೊರೆತದಿಂದ ಮಳೆಗಾಲದಲ್ಲಿ ಸಮಸ್ಯೆಗಳು ಖಾಯಂ ಆಗಿದೆ ಎನ್ನುತ್ತಾರೆ ಸ್ಥಳೀಯ ನಿವಾಸಿಗಳು.