<p><strong>ಕುಂದಾಪುರ</strong>: ಮಂಗಳೂರಿನ ಯುವ ವಕೀಲ ಕುಲದೀಪ್ ಶೆಟ್ಟಿ ಅವರ ಮೇಲೆ ಬಂಟ್ವಾಳದ ಪುಂಜಾಲಕಟ್ಟೆಯ ಠಾಣೆಯ ಪೊಲೀಸರು ನಡೆಸಿದ ದೌರ್ಜನ್ಯವನ್ನು ಖಂಡಿಸಿ ಬುಧವಾರ ತಾಲ್ಲೂಕು ಬಾರ್ ಅಸೋಸೀಯೇಶನ್ ಅಧ್ಯಕ್ಷ ಬನ್ನಾಡಿ ಸೋಮನಾಥ್ ಹೆಗ್ಡೆ ಅವರ ನೇತೃತ್ವದಲ್ಲಿ ವಕೀಲರು ಪ್ರತಿಭಟನೆ ನಡೆಸಿದರು.</p>.<p>ಸಿವಿಲ್ ವ್ಯಾಜ್ಯ ನ್ಯಾಯಾಲಯದಲ್ಲಿ ಇದ್ದು, ಪ್ರತಿಬಂಧಕಾಜ್ಞೆ ಇದ್ದರೂ ಕೂಡ ಎದುರುದಾರರ ಸುಳ್ಳು ದೂರಿನ ಆಧಾರದಲ್ಲಿ ಯುವ ವಕೀಲರ ಮೇಲೆ ಪ್ರಕರಣ ದಾಖಲಿಸಿ ರಾತೋರಾತ್ರಿ ಮನೆ ಪ್ರವೇಶ ಮಾಡಿ ಮನೆಯಿಂದ ಎಳೆದುಕೊಂಡು ಹೋಗಿ ನಡೆಸಿದ ದೌರ್ಜನ್ಯವನ್ನು ಸಭೆಯಲ್ಲಿ ಖಂಡಿಸಿದ್ದಲ್ಲದೆ, ತಪ್ಪಿತಸ್ಥ ಪೋಲೀಸರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಯಿತು.</p>.<p>ಕುಂದಾಪುರ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಜೆ.ಶ್ರೀನಾಥ್ ರಾವ್, ಉಪಾಧ್ಯಕ್ಷೆ ಬೀನಾ ಜೊಸೆಫ್, ಜತೆ ಕಾರ್ಯದರ್ಶಿ ರಿತೇಶ್ ಬಿ ಹಾಗೂ ಕೋಶಾಧಿಕಾರಿ ಹಾಲಾಡಿ ದಿನಕರ್ ಕುಲಾಲ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಂದಾಪುರ</strong>: ಮಂಗಳೂರಿನ ಯುವ ವಕೀಲ ಕುಲದೀಪ್ ಶೆಟ್ಟಿ ಅವರ ಮೇಲೆ ಬಂಟ್ವಾಳದ ಪುಂಜಾಲಕಟ್ಟೆಯ ಠಾಣೆಯ ಪೊಲೀಸರು ನಡೆಸಿದ ದೌರ್ಜನ್ಯವನ್ನು ಖಂಡಿಸಿ ಬುಧವಾರ ತಾಲ್ಲೂಕು ಬಾರ್ ಅಸೋಸೀಯೇಶನ್ ಅಧ್ಯಕ್ಷ ಬನ್ನಾಡಿ ಸೋಮನಾಥ್ ಹೆಗ್ಡೆ ಅವರ ನೇತೃತ್ವದಲ್ಲಿ ವಕೀಲರು ಪ್ರತಿಭಟನೆ ನಡೆಸಿದರು.</p>.<p>ಸಿವಿಲ್ ವ್ಯಾಜ್ಯ ನ್ಯಾಯಾಲಯದಲ್ಲಿ ಇದ್ದು, ಪ್ರತಿಬಂಧಕಾಜ್ಞೆ ಇದ್ದರೂ ಕೂಡ ಎದುರುದಾರರ ಸುಳ್ಳು ದೂರಿನ ಆಧಾರದಲ್ಲಿ ಯುವ ವಕೀಲರ ಮೇಲೆ ಪ್ರಕರಣ ದಾಖಲಿಸಿ ರಾತೋರಾತ್ರಿ ಮನೆ ಪ್ರವೇಶ ಮಾಡಿ ಮನೆಯಿಂದ ಎಳೆದುಕೊಂಡು ಹೋಗಿ ನಡೆಸಿದ ದೌರ್ಜನ್ಯವನ್ನು ಸಭೆಯಲ್ಲಿ ಖಂಡಿಸಿದ್ದಲ್ಲದೆ, ತಪ್ಪಿತಸ್ಥ ಪೋಲೀಸರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಯಿತು.</p>.<p>ಕುಂದಾಪುರ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಜೆ.ಶ್ರೀನಾಥ್ ರಾವ್, ಉಪಾಧ್ಯಕ್ಷೆ ಬೀನಾ ಜೊಸೆಫ್, ಜತೆ ಕಾರ್ಯದರ್ಶಿ ರಿತೇಶ್ ಬಿ ಹಾಗೂ ಕೋಶಾಧಿಕಾರಿ ಹಾಲಾಡಿ ದಿನಕರ್ ಕುಲಾಲ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>