ಸಿವಿಲ್ ವ್ಯಾಜ್ಯ ನ್ಯಾಯಾಲಯದಲ್ಲಿ ಇದ್ದು, ಪ್ರತಿಬಂಧಕಾಜ್ಞೆ ಇದ್ದರೂ ಕೂಡ ಎದುರುದಾರರ ಸುಳ್ಳು ದೂರಿನ ಆಧಾರದಲ್ಲಿ ಯುವ ವಕೀಲರ ಮೇಲೆ ಪ್ರಕರಣ ದಾಖಲಿಸಿ ರಾತೋರಾತ್ರಿ ಮನೆ ಪ್ರವೇಶ ಮಾಡಿ ಮನೆಯಿಂದ ಎಳೆದುಕೊಂಡು ಹೋಗಿ ನಡೆಸಿದ ದೌರ್ಜನ್ಯವನ್ನು ಸಭೆಯಲ್ಲಿ ಖಂಡಿಸಿದ್ದಲ್ಲದೆ, ತಪ್ಪಿತಸ್ಥ ಪೋಲೀಸರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಯಿತು.