ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಸಿಸಿಟಿವಿ ದೃಶ್ಯಾವಳಿ ಹಾಗೂ ಕೆಲವು ಮಹತ್ತರ ಸಾಕ್ಷಿಗಳನ್ನು ಕಲೆ ಹಾಕಿದ್ದರು. ಎಸ್.ಪಿ ಅರುಣ್ ಹಾಗೂ ಡಿವೈಎಸ್ಪಿ ಬೆಳ್ಳಿಯಪ್ಪ ಕೆ.ಯು ಅವರ ಮಾರ್ಗದರ್ಶನದಲ್ಲಿ ಮೂರು ತಂಡಗಳಲ್ಲಿ ಬೆಂಗಳೂರು, ಶಿವಮೊಗ್ಗ , ಕೊಪ್ಪ, ಕಾರ್ಕಳ ಸೇರಿದಂತೆ ರಾಜ್ಯದ ಹಲವು ಕಡೆಗಳಲ್ಲಿ ಶೋಧ ಕಾರ್ಯ ನಡೆಸಿದ್ದರು.