ಇಲ್ಲಿನ ರಸ್ತೆಗಳು ಒಳ್ಳೆಯ ಸ್ಥಿತಿಯಲ್ಲಿ ಇದ್ದರೂ, ರಸ್ತೆಯ ಬದಿಯಲ್ಲಿ ಹುಲ್ಲು, ಕಸ-ಕಡ್ಡಿ ಇರುವುದರಿಂದಾಗಿ, ರಸ್ತೆಯ ಬದಿಯಲ್ಲಿ ನಡೆದಾಡಲು ಕಷ್ಟಪಡಬೇಕಾದ ಸ್ಥಿತಿ ಇದೆ. ಮಳೆಗಾಲದ ಅವಧಿಯಲ್ಲಿ ಈ ಭಾಗಗಳಲ್ಲಿ ಕಾಲಿಡುವುದು ಅಸಾಧ್ಯವಾಗಿದೆ. ಈ ಕಾರಣಕ್ಕಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ಸಿನಿಂದ ಇಳಿದು ಕಾಲೇಜಿಗೆ ನಡೆದುಕೊಂಡು ಬರುವ ವಿದ್ಯಾರ್ಥಿಗಳು ರಸ್ತೆಯ ಬದಿಗಳನ್ನು ಬಿಟ್ಟು ಮುಖ್ಯ ರಸ್ತೆಯಲ್ಲಿಯೇ ನಡೆಯಬೇಕಾದ ಸ್ಥಿತಿ ಇದೆ. ಇದರಿಂದ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರು ಪ್ರಯಾಸವಾಗಿ ಸಂಚರಿಸಬೇಕು, ಜೊತೆಯಲ್ಲಿ ಅಪಘಾತದ ಭೀತಿಯೂ ಇದೆ.