<p><strong>ಕುಂದಾಪುರ</strong>: ರಾಷ್ಟ್ರೀಯ ಹೆದ್ದಾರಿಯ 66ರಲ್ಲಿ ತೆಕ್ಕಟ್ಟೆ ಕಾರ್ಟೆಕ್ ಸಮೀಪ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ದಾಟಿ ವಿರುದ್ಧ ದಿಕ್ಕಿನ ರಸ್ತೆಯ ಚರಂಡಿಗೆ ಪಲ್ಟಿ ಹೊಡೆದ ಪರಿಣಾಮವಾಗಿ ಕಾರಿನಲ್ಲಿದ್ದ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.</p>.<p>ಪ್ರಥಮೇಶ್ (23), ಓಂಕಾರ್ (23), ಓಂ ಗಣೇಶ (23), ಕಾರ್ತೀಕ್ (23), ಸುಜನ್(23) ಗಾಯಗೊಂಡವರು. ಅವರನ್ನು ಚಿಕಿತ್ಸೆಗಾಗಿ ಕೋಟೇಶ್ವರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ ಓಂಕಾರ್ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p>ಇವರೆಲ್ಲರೂ ಮಹಾರಾಷ್ಟ್ರದ ಪುಣೆಯ ಕಾನೂನು ಮತ್ತು ಎಂಜಿನಿಯರಿಂಗ್ ಕಾಲೇಜುಗಳ ವಿದ್ಯಾರ್ಥಿಗಳು. ಒಟ್ಟು 12 ವಿದ್ಯಾರ್ಥಿಗಳು ಜನವರಿ 31ರಂದು ಎರಡು ಕಾರುಗಳಲ್ಲಿ ಪ್ರವಾಸ ಹೊರಟಿದ್ದರು. ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿ ಪುಣೆಗೆ ವಾಪಸಾಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. </p>.<p>ಸ್ಥಳೀಯರು ಹಾಗೂ ತೆಕ್ಕಟ್ಟೆ ಫ್ರೆಂಡ್ಸ್ ಸದಸ್ಯರು ಗಾಯಾಳುಗಳನ್ನು ಕಾರಿನಿಂದ ಹೊರ ತೆಗೆದು ಆಸ್ಪತ್ರೆಗೆ ಸೇರಿಸಲು ಸಹಕರಿಸಿದರು. ಕೋಟ ಠಾಣಾಧಿಕಾರಿ ಪ್ರವೀಣ್ ಕುಮಾರ್ ಆರ್ ಸ್ಥಳಕ್ಕೆ ಭೇಟಿ ನೀಡಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಂದಾಪುರ</strong>: ರಾಷ್ಟ್ರೀಯ ಹೆದ್ದಾರಿಯ 66ರಲ್ಲಿ ತೆಕ್ಕಟ್ಟೆ ಕಾರ್ಟೆಕ್ ಸಮೀಪ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ದಾಟಿ ವಿರುದ್ಧ ದಿಕ್ಕಿನ ರಸ್ತೆಯ ಚರಂಡಿಗೆ ಪಲ್ಟಿ ಹೊಡೆದ ಪರಿಣಾಮವಾಗಿ ಕಾರಿನಲ್ಲಿದ್ದ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.</p>.<p>ಪ್ರಥಮೇಶ್ (23), ಓಂಕಾರ್ (23), ಓಂ ಗಣೇಶ (23), ಕಾರ್ತೀಕ್ (23), ಸುಜನ್(23) ಗಾಯಗೊಂಡವರು. ಅವರನ್ನು ಚಿಕಿತ್ಸೆಗಾಗಿ ಕೋಟೇಶ್ವರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ ಓಂಕಾರ್ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p>ಇವರೆಲ್ಲರೂ ಮಹಾರಾಷ್ಟ್ರದ ಪುಣೆಯ ಕಾನೂನು ಮತ್ತು ಎಂಜಿನಿಯರಿಂಗ್ ಕಾಲೇಜುಗಳ ವಿದ್ಯಾರ್ಥಿಗಳು. ಒಟ್ಟು 12 ವಿದ್ಯಾರ್ಥಿಗಳು ಜನವರಿ 31ರಂದು ಎರಡು ಕಾರುಗಳಲ್ಲಿ ಪ್ರವಾಸ ಹೊರಟಿದ್ದರು. ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿ ಪುಣೆಗೆ ವಾಪಸಾಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. </p>.<p>ಸ್ಥಳೀಯರು ಹಾಗೂ ತೆಕ್ಕಟ್ಟೆ ಫ್ರೆಂಡ್ಸ್ ಸದಸ್ಯರು ಗಾಯಾಳುಗಳನ್ನು ಕಾರಿನಿಂದ ಹೊರ ತೆಗೆದು ಆಸ್ಪತ್ರೆಗೆ ಸೇರಿಸಲು ಸಹಕರಿಸಿದರು. ಕೋಟ ಠಾಣಾಧಿಕಾರಿ ಪ್ರವೀಣ್ ಕುಮಾರ್ ಆರ್ ಸ್ಥಳಕ್ಕೆ ಭೇಟಿ ನೀಡಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>