<p><strong>ಕುಂದಾಪುರ</strong>: ತಾಲ್ಲೂಕಿನ ಬೆಳ್ಳಾಲ ಗ್ರಾಮದ ಹೊಟ್ನಬೈಲು ಎಂಬಲ್ಲಿ ಆವರಣವಿಲ್ಲದ ಬಾವಿಗೆ ಬಿದ್ದು, ಇಬ್ಬರು ಮಕ್ಕಳು ಮೃತಪಟ್ಟು, ತಾಯಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ಸೇರಿದ ಘಟನೆ ಶನಿವಾರ ನಡೆದಿದೆ.</p>.<p>ಮೃತಪಟ್ಟವರನ್ನು ಧೀರಜ್ (13) ಹಾಗೂ ಛಾಯಾ (8) ಎಂದು ಗುರುತಿಸಲಾಗಿದೆ. ತಾಯಿ ಶೀಲಾ (43) ಎಂಬುವವರನ್ನು ರಕ್ಷಣೆ ಮಾಡಲಾಗಿದ್ದು, ಚಿಕಿತ್ಸೆಗಾಗಿ ಕುಂದಾಪುರದ ಆದರ್ಶ ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p>ಶನಿವಾರ ಮಧ್ಯಾಹ್ನ ಮೂರು ಗಂಟೆಯ ವೇಳೆಗೆ ಮನೆಯ ಸಮೀಪದ ಗದ್ದೆಯಲ್ಲಿನ ಬಾವಿಗೆ ಮಕ್ಕಳೊಂದಿಗೆ ತಾಯಿಯೂ ಬಿದ್ದಿದ್ದರು. ಮಾಹಿತಿ ಅರಿತ ಸ್ಥಳೀಯರು ರಕ್ಷಣೆಗೆ ಧಾವಿಸಿ, ಮೂವರನ್ನೂ ಮೇಲಕ್ಕೆತ್ತುವ ಪ್ರಯತ್ನ ಮಾಡಿದರಾದರೂ, ಇಬ್ಬರು ಮಕ್ಕಳು ಬದುಕುಳಿಯಲಿಲ್ಲ.</p>.<p>ನೀರು ಕುಡಿದು ಗಂಭೀರ ಸ್ಥಿತಿಯಲ್ಲಿದ್ದ ತಾಯಿಯನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಮಕ್ಕಳ ಸಹಿತ ತಾಯಿ ಆಕಸ್ಮಿಕವಾಗಿ ಬಾವಿಗೆ ಬಿದ್ದರೇ ಅಥವಾ ಮಕ್ಕಳೊಂದಿಗೆ ಆತ್ಮಹತ್ಯೆ ಪ್ರಯತ್ನಕ್ಕೆ ಮುಂದಾಗಿದ್ದರೇ ಎನ್ನುವುದು ತನಿಖೆಯಿಂದ ತಿಳಿದು ಬರಬೇಕಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<p>ಶಾಲೆಗೆ ತೆರಳಿದ್ದ ಮಕ್ಕಳು ಶನಿವಾರ ಮಧ್ಯಾಹ್ನದ ನಂತರ ರಜೆ ಇದ್ದುದರಿಂದ ಮನೆಗೆ ಮರಳಿದ್ದರು ಎಂದು ಸ್ಥಳೀಯ ಕೆಲವರು ಹೇಳುತ್ತಿದ್ದು, ಈ ಕುರಿತಂತೆ ಯಾವುದೇ ಸ್ಪಷ್ಟ ಮಾಹಿತಿ ದೊರೆತಿಲ್ಲ.</p>.<p>ಘಟನಾ ಸ್ಥಳಕ್ಕೆ ಕೊಲ್ಲೂರು ಠಾಣೆಯ ಎಸ್.ಐ. ಜಯಶ್ರೀ ಹಾಗೂ ಪೊಲೀಸರು ಭೇಟಿ ನೀಡಿದ್ದಾರೆ. ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಯು.ಡಿ.ಆರ್. ದಾಖಲಿಸಲಾಗಿದ್ದು ತನಿಖೆ ಮುಂದುವರಿದಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಂದಾಪುರ</strong>: ತಾಲ್ಲೂಕಿನ ಬೆಳ್ಳಾಲ ಗ್ರಾಮದ ಹೊಟ್ನಬೈಲು ಎಂಬಲ್ಲಿ ಆವರಣವಿಲ್ಲದ ಬಾವಿಗೆ ಬಿದ್ದು, ಇಬ್ಬರು ಮಕ್ಕಳು ಮೃತಪಟ್ಟು, ತಾಯಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ಸೇರಿದ ಘಟನೆ ಶನಿವಾರ ನಡೆದಿದೆ.</p>.<p>ಮೃತಪಟ್ಟವರನ್ನು ಧೀರಜ್ (13) ಹಾಗೂ ಛಾಯಾ (8) ಎಂದು ಗುರುತಿಸಲಾಗಿದೆ. ತಾಯಿ ಶೀಲಾ (43) ಎಂಬುವವರನ್ನು ರಕ್ಷಣೆ ಮಾಡಲಾಗಿದ್ದು, ಚಿಕಿತ್ಸೆಗಾಗಿ ಕುಂದಾಪುರದ ಆದರ್ಶ ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p>ಶನಿವಾರ ಮಧ್ಯಾಹ್ನ ಮೂರು ಗಂಟೆಯ ವೇಳೆಗೆ ಮನೆಯ ಸಮೀಪದ ಗದ್ದೆಯಲ್ಲಿನ ಬಾವಿಗೆ ಮಕ್ಕಳೊಂದಿಗೆ ತಾಯಿಯೂ ಬಿದ್ದಿದ್ದರು. ಮಾಹಿತಿ ಅರಿತ ಸ್ಥಳೀಯರು ರಕ್ಷಣೆಗೆ ಧಾವಿಸಿ, ಮೂವರನ್ನೂ ಮೇಲಕ್ಕೆತ್ತುವ ಪ್ರಯತ್ನ ಮಾಡಿದರಾದರೂ, ಇಬ್ಬರು ಮಕ್ಕಳು ಬದುಕುಳಿಯಲಿಲ್ಲ.</p>.<p>ನೀರು ಕುಡಿದು ಗಂಭೀರ ಸ್ಥಿತಿಯಲ್ಲಿದ್ದ ತಾಯಿಯನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಮಕ್ಕಳ ಸಹಿತ ತಾಯಿ ಆಕಸ್ಮಿಕವಾಗಿ ಬಾವಿಗೆ ಬಿದ್ದರೇ ಅಥವಾ ಮಕ್ಕಳೊಂದಿಗೆ ಆತ್ಮಹತ್ಯೆ ಪ್ರಯತ್ನಕ್ಕೆ ಮುಂದಾಗಿದ್ದರೇ ಎನ್ನುವುದು ತನಿಖೆಯಿಂದ ತಿಳಿದು ಬರಬೇಕಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<p>ಶಾಲೆಗೆ ತೆರಳಿದ್ದ ಮಕ್ಕಳು ಶನಿವಾರ ಮಧ್ಯಾಹ್ನದ ನಂತರ ರಜೆ ಇದ್ದುದರಿಂದ ಮನೆಗೆ ಮರಳಿದ್ದರು ಎಂದು ಸ್ಥಳೀಯ ಕೆಲವರು ಹೇಳುತ್ತಿದ್ದು, ಈ ಕುರಿತಂತೆ ಯಾವುದೇ ಸ್ಪಷ್ಟ ಮಾಹಿತಿ ದೊರೆತಿಲ್ಲ.</p>.<p>ಘಟನಾ ಸ್ಥಳಕ್ಕೆ ಕೊಲ್ಲೂರು ಠಾಣೆಯ ಎಸ್.ಐ. ಜಯಶ್ರೀ ಹಾಗೂ ಪೊಲೀಸರು ಭೇಟಿ ನೀಡಿದ್ದಾರೆ. ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಯು.ಡಿ.ಆರ್. ದಾಖಲಿಸಲಾಗಿದ್ದು ತನಿಖೆ ಮುಂದುವರಿದಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>