ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜೀವ ವೈವಿಧ್ಯ ಮಂಡಳಿ ಸಭೆಯ ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿ, ರಾಜ್ಯದಲ್ಲಿಯೇ ವಿಸ್ತಾರವಾದ ಕಾಂಡ್ಲಾವನ ಪಂಚ ಗಂಗಾವಳಿ ತೀರದಲ್ಲಿದ್ದು, ಈ ಪ್ರದೇಶವನ್ನು ಪಾರಂಪರಿಕ ಜೀವವೈವಿಧ್ಯ ತಾಣವಾಗಿಸಲು ತೀರ್ಮಾನಿಸಲಾಗಿದೆ. ಸಿಆರ್ಝೆಡ್ ಅಧಿಕಾರಿಗಳು ಹಾಗೂ ಕುಂದಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿ ವರದಿ ಸಲ್ಲಿಸಿದ ಬಳಿಕ ಜೀವವೈವಿಧ್ಯ ಮಂಡಳಿಯ ಸಭೆಯಲ್ಲಿ ಘೋಷಿಸಲಾಗುವುದು ಎಂದರು.