ಕಾರ್ಯಕ್ಷಮತೆಯಿಂದ ಪ್ರಧಾನಿ ಮೋದಿ ಸಂಪುಟದಲ್ಲಿ ಸ್ಥಾನ ಪಡೆದಿರುವ ಶೋಭಾ ಕರಂದ್ಲಾಜೆ ವಿರುದ್ಧ ಅಪ್ರಬುದ್ಧ ರಾಜಕಾರಣಿ ಮಿಥುನ್ ರೈ ಬಾಲಿಷ ಹೇಳಿಕೆ ನೀಡಿರುವುದು ಖಂಡನೀಯ. ರಾಜ್ಯದಲ್ಲಿ ಸಚಿವೆಯಾಗಿ ಉತ್ತಮ ಕೆಲಸ ಮಾಡಿರುವ, ಖಾತೆಗಳನ್ನು ಸಮರ್ಥವಾಗಿ ನಿಭಾಯಿಸಿರುವ ಶೋಭಾ ಅವರ ಕಾರ್ಯಗಳ ಕುರಿತು ಚರ್ಚಿಸಲು ಬಿಜೆಪಿ ಸಿದ್ಧವಿದೆ. ಮಿಥುನ್ ರೈ ಅವರಿಗೆ ಆಸಕ್ತಿ ಇದ್ದರೆ ನೇರ ಚರ್ಚೆಗೆ ಬರಲಿ. ಪುಕ್ಕಟೆ ಪ್ರಚಾರಕ್ಕಾಗಿ ಗಾಳಿಯಲ್ಲಿ ಗುಂಡು ಹಾರಿಸುವುದು ಬೇಡ ಎಂದು ತಿರುಗೇಟು ನೀಡಿದ್ದಾರೆ.