<p><strong>ಉಡುಪಿ</strong>: ಕೇಂದ್ರ ಸರ್ಕಾರದ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ವಿರೋಧಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (ಜೆಸಿಟಿಯು) ವತಿಯಿಂದ ಕರೆ ನೀಡಿರುವ ಅಖಿಲ ಭಾರತ ಸಾರ್ವತ್ರಿಕ ಮುಷ್ಕರದ ಅಂಗವಾಗಿ ಗುರುವಾರ ನಗರದ ಜೋಡುಕಟ್ಟೆಯ ಬಳಿ ಕಾರ್ಮಿಕರ ಸಂಘಟನೆಯ ಪದಾಧಿಕಾರಿಗಳು ರಸ್ತೆ ತಡೆದು ಪ್ರತಿಭಟನೆ ನಡೆಸಿದರು.</p><p>ಅದಕ್ಕೂ ಮೊದಲು ನಗರದ ಕೆಎಸ್ಆರ್ಟಿಸಿ ಹಳೆ ಬಸ್ ನಿಲ್ದಾಣದ ಬಳಿ ನಡೆದ ಬಹಿರಂಗ ಸಭೆಯಲ್ಲಿ ಮಾತನಾಡಿದ ಚಿಂತಕ ಕೆ. ಫಣಿರಾಜ್, ಕಳೆದ 12 ವರ್ಷಗಳಿಂದ ಕೇಂದ್ರ ಸರ್ಕಾರವು ಪ್ರಜಾಪ್ರಭುತ್ವದ ಎಲ್ಲಾ ಹಕ್ಕುಗಳನ್ನು ಧಮನ ಮಾಡುತ್ತಿದೆ ಎಂದು ಆರೋಪಿಸಿದರು.</p><p>ಬಂಡವಾಳಶಾಹಿಗಳಿಗೆ ಪರವಾದ ಮತ್ತು ಕಾರ್ಮಿಕರಿಗೆ ಮಾರಕವಾದ ನೀತಿಗಳನ್ನು ಕೇಂದ್ರ ಸರ್ಕಾರ ಅನುಸರಿಸುತ್ತದೆ ಎಂದರು.</p><p>ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ವಿವಿಧ ಕಾರ್ಮಿಕ ಸಂಘಟನೆಗಳ ಮುಖಂಡರಾದ ಸುರೇಶ್ ಕಲ್ಲಾಗರ, ಕವಿರಾಜ್ ಎಸ್. ಕಾಂಚನ್, ಕಿರಣ್ ಹೆಗ್ಡೆ, ನಾಗೇಶ್ ನಾಯಕ್ ಉಪಸ್ಥಿತರಿದ್ದರು.</p><p>ಬಳಿಕ ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ</strong>: ಕೇಂದ್ರ ಸರ್ಕಾರದ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ವಿರೋಧಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (ಜೆಸಿಟಿಯು) ವತಿಯಿಂದ ಕರೆ ನೀಡಿರುವ ಅಖಿಲ ಭಾರತ ಸಾರ್ವತ್ರಿಕ ಮುಷ್ಕರದ ಅಂಗವಾಗಿ ಗುರುವಾರ ನಗರದ ಜೋಡುಕಟ್ಟೆಯ ಬಳಿ ಕಾರ್ಮಿಕರ ಸಂಘಟನೆಯ ಪದಾಧಿಕಾರಿಗಳು ರಸ್ತೆ ತಡೆದು ಪ್ರತಿಭಟನೆ ನಡೆಸಿದರು.</p><p>ಅದಕ್ಕೂ ಮೊದಲು ನಗರದ ಕೆಎಸ್ಆರ್ಟಿಸಿ ಹಳೆ ಬಸ್ ನಿಲ್ದಾಣದ ಬಳಿ ನಡೆದ ಬಹಿರಂಗ ಸಭೆಯಲ್ಲಿ ಮಾತನಾಡಿದ ಚಿಂತಕ ಕೆ. ಫಣಿರಾಜ್, ಕಳೆದ 12 ವರ್ಷಗಳಿಂದ ಕೇಂದ್ರ ಸರ್ಕಾರವು ಪ್ರಜಾಪ್ರಭುತ್ವದ ಎಲ್ಲಾ ಹಕ್ಕುಗಳನ್ನು ಧಮನ ಮಾಡುತ್ತಿದೆ ಎಂದು ಆರೋಪಿಸಿದರು.</p><p>ಬಂಡವಾಳಶಾಹಿಗಳಿಗೆ ಪರವಾದ ಮತ್ತು ಕಾರ್ಮಿಕರಿಗೆ ಮಾರಕವಾದ ನೀತಿಗಳನ್ನು ಕೇಂದ್ರ ಸರ್ಕಾರ ಅನುಸರಿಸುತ್ತದೆ ಎಂದರು.</p><p>ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ವಿವಿಧ ಕಾರ್ಮಿಕ ಸಂಘಟನೆಗಳ ಮುಖಂಡರಾದ ಸುರೇಶ್ ಕಲ್ಲಾಗರ, ಕವಿರಾಜ್ ಎಸ್. ಕಾಂಚನ್, ಕಿರಣ್ ಹೆಗ್ಡೆ, ನಾಗೇಶ್ ನಾಯಕ್ ಉಪಸ್ಥಿತರಿದ್ದರು.</p><p>ಬಳಿಕ ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>