<p><strong>ಕಾರ್ಕಳ</strong>: ತಾಲ್ಲೂಕಿನ ದುರ್ಗಾ ಗ್ರಾಮದಲ್ಲಿ ಪುರಸಭೆಯ ವತಿಯಿಂದ ಮುಂಡ್ಲಿ ಜಾಕ್ವೆಲ್ಗೆ ನೀರು ಒದಗಿಸುವ ಎಂಎಸ್ ಗೇಟ್ಗಳು ಹಾಗೂ ಪಂಪ್ಹೌಸ್ನ ಕೆಳಭಾಗದ ದಾಸ್ತಾನು ಕೊಠಡಿಯಲ್ಲಿ ಶೇಖರಿಸಿಟ್ಟಿದ್ದ ಒಟ್ಟು 160 ಸಂಖ್ಯೆಯ ಎಂಎಸ್ ಗೇಟ್ಗಳು ಹಾಗೂ ಜಾಕ್ವೆಲ್ಗೆ ಬೆಳಕಿಗಾಗಿ ಅಳವಡಿಸಿದ್ದ 3 ಸೋಲಾರ್ ದೀಪಗಳ ಬ್ಯಾಟರಿಗಳನ್ನು ಕದ್ದೊಯ್ದ ಘಟನೆ ನಡೆದಿದೆ. ಇವುಗಳ ಒಟ್ಟು ಮೌಲ್ಯ ₹ 4.95 ಲಕ್ಷ ಎಂದು ಅಂದಾಜಿಸಲಾಗಿದೆ. ಈ ಕುರಿತು ಪುರಸಭೆ ಮುಖ್ಯಾಧಿಕಾರಿ ರೂಪಾ ಟಿ. ಶೆಟ್ಟಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.</p>.<p class="Briefhead"><strong>ವ್ಯಕ್ತಿ ಆತ್ಮಹತ್ಯೆ</strong></p>.<p><strong>ಕಾರ್ಕಳ</strong>: ತಾಲ್ಲೂಕಿನ ಮಿಯ್ಯಾರು ಗ್ರಾಮದ ಪಕಳ ಬೆಟ್ಟು ನಿವಾಸಿ ಬಾಬು ಪೂಜಾರಿ (55) ಎನ್ನುವವರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p class="Briefhead"><strong>ಅಪಘಾತ: ಸ್ಕೂಟರ್ ಸವಾರ ಸಾವು</strong></p>.<p>ಹಿರಿಯಡಕ: ಹಿರಿಯಡಕ ಸಮೀಪದ ಗುಡ್ಡೆಯಂಗಡಿಯಲ್ಲಿ ಮಿನಿ ಟೆಂಪೊ ಮತ್ತು ಸ್ಕೂಟರ್ ನಡುವಿನ ಅಪಘಾತದಲ್ಲಿ ಸ್ಕೂಟರ್ ಸವಾರ ಮೃತಪಟ್ಟಿದ್ದಾರೆ. ಗುಡ್ಡೆಯಂಗಡಿ ನಿವಾಸಿ ವಿಘ್ನೇಶ್ ಪೂಜಾರಿ ಮೃತ ವ್ಯಕ್ತಿ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.</p>.<p>ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟರು. ಕಾರ್ಕಳದಿಂದ ಮಣಿಪಾಲದ ಕಡೆಗೆ ವೇಗವಾಗಿ ಟೆಂಪೊ ಚಲಾಯಿಸಿಕೊಂಡು ಹೋಗಿ, ಸ್ಕೂಟರ್ಗೆ ಡಿಕ್ಕಿ ಹೊಡೆದ ಆರೋಪದ ಮೇಲೆ ಚಾಲಕ ರವಿ ವಿರುದ್ಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರ್ಕಳ</strong>: ತಾಲ್ಲೂಕಿನ ದುರ್ಗಾ ಗ್ರಾಮದಲ್ಲಿ ಪುರಸಭೆಯ ವತಿಯಿಂದ ಮುಂಡ್ಲಿ ಜಾಕ್ವೆಲ್ಗೆ ನೀರು ಒದಗಿಸುವ ಎಂಎಸ್ ಗೇಟ್ಗಳು ಹಾಗೂ ಪಂಪ್ಹೌಸ್ನ ಕೆಳಭಾಗದ ದಾಸ್ತಾನು ಕೊಠಡಿಯಲ್ಲಿ ಶೇಖರಿಸಿಟ್ಟಿದ್ದ ಒಟ್ಟು 160 ಸಂಖ್ಯೆಯ ಎಂಎಸ್ ಗೇಟ್ಗಳು ಹಾಗೂ ಜಾಕ್ವೆಲ್ಗೆ ಬೆಳಕಿಗಾಗಿ ಅಳವಡಿಸಿದ್ದ 3 ಸೋಲಾರ್ ದೀಪಗಳ ಬ್ಯಾಟರಿಗಳನ್ನು ಕದ್ದೊಯ್ದ ಘಟನೆ ನಡೆದಿದೆ. ಇವುಗಳ ಒಟ್ಟು ಮೌಲ್ಯ ₹ 4.95 ಲಕ್ಷ ಎಂದು ಅಂದಾಜಿಸಲಾಗಿದೆ. ಈ ಕುರಿತು ಪುರಸಭೆ ಮುಖ್ಯಾಧಿಕಾರಿ ರೂಪಾ ಟಿ. ಶೆಟ್ಟಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.</p>.<p class="Briefhead"><strong>ವ್ಯಕ್ತಿ ಆತ್ಮಹತ್ಯೆ</strong></p>.<p><strong>ಕಾರ್ಕಳ</strong>: ತಾಲ್ಲೂಕಿನ ಮಿಯ್ಯಾರು ಗ್ರಾಮದ ಪಕಳ ಬೆಟ್ಟು ನಿವಾಸಿ ಬಾಬು ಪೂಜಾರಿ (55) ಎನ್ನುವವರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p class="Briefhead"><strong>ಅಪಘಾತ: ಸ್ಕೂಟರ್ ಸವಾರ ಸಾವು</strong></p>.<p>ಹಿರಿಯಡಕ: ಹಿರಿಯಡಕ ಸಮೀಪದ ಗುಡ್ಡೆಯಂಗಡಿಯಲ್ಲಿ ಮಿನಿ ಟೆಂಪೊ ಮತ್ತು ಸ್ಕೂಟರ್ ನಡುವಿನ ಅಪಘಾತದಲ್ಲಿ ಸ್ಕೂಟರ್ ಸವಾರ ಮೃತಪಟ್ಟಿದ್ದಾರೆ. ಗುಡ್ಡೆಯಂಗಡಿ ನಿವಾಸಿ ವಿಘ್ನೇಶ್ ಪೂಜಾರಿ ಮೃತ ವ್ಯಕ್ತಿ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.</p>.<p>ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟರು. ಕಾರ್ಕಳದಿಂದ ಮಣಿಪಾಲದ ಕಡೆಗೆ ವೇಗವಾಗಿ ಟೆಂಪೊ ಚಲಾಯಿಸಿಕೊಂಡು ಹೋಗಿ, ಸ್ಕೂಟರ್ಗೆ ಡಿಕ್ಕಿ ಹೊಡೆದ ಆರೋಪದ ಮೇಲೆ ಚಾಲಕ ರವಿ ವಿರುದ್ಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>