<p><strong>ಹೆಬ್ರಿ: ‘</strong>ಸಾಮಾಜಿಕ ಜಾಲತಾಣವನ್ನು ವಿದ್ಯಾರ್ಥಿಗಳು ಉಪಯುಕ್ತ ಮಾಹಿತಿಗೆ ಮಾತ್ರ ಬಳಸಬೇಕು. ಸುಳ್ಳು ಸುದ್ದಿಗಳನ್ನು ಹಂಚಿಕೊಳ್ಳದೆ, ಮಾದಕ ವಸ್ತುಗಳಿಂದ ದೂರ ಇದ್ದು, ವಿದ್ಯಾರ್ಥಿ ಜೀವನವನ್ನು ಯಶಸ್ವಿಗೊಳಿಸಿ’ ಎಂದು ಹೆಬ್ರಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ರವಿ ಬಿ.ಕೆ. ಹೇಳಿದರು.</p>.<p>ಹೆಬ್ರಿಯ ಕುಚ್ಚೂರು ಕುಡಿಬೈಲ್ ಶಾಂತಿನಿಕೇತನ ಯುವ ವೃಂದ ಮತ್ತು ಹೆಬ್ರಿ ಶ್ರೀರಾಘವೇಂದ್ರ ಚಾರಿಟಬಲ್ ಟ್ರಸ್ಟ್ ವತಿಯಿಂದ ಕುಚ್ಚೂರು ಹೆರ್ಗ ವಿಠಲಶೆಟ್ಟಿ ಪ್ರೌಢಶಾಲೆಯಲ್ಲಿ ನಡೆದ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಹೆತ್ತವರು ತಮ್ಮ ಮೇಲೆ ಆಸೆ ಆಕಾಂಕ್ಷೆ ಇಟ್ಟಿರುತ್ತಾರೆ. ಆದ್ದರಿಂದ ವಿದ್ಯಾರ್ಥಿಗಳು ಜಾಗೃತರಾಗಿರಬೇಕು. ಸ್ಪರ್ಧಾತ್ಮಕ ಯುಗದಲ್ಲಿ ಕೌಶಲಗಳು ಬಹಳ ಅಗತ್ಯ. ಅದನ್ನು ಕಲಿಯಿರಿ’ ಎಂದು ಪಿಎಸ್ಐ ರವಿ ಹೇಳಿದರು.</p>.<p>ಹೆಬ್ರಿ ಶ್ರೀ ರಾಘವೇಂದ್ರ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷೆ ಭಾರ್ಗವಿ ಆರ್. ಐತಾಳ್ ಮಾತನಾಡಿ, ‘ಕಾನೂನಿನ ಪಾಲನೆ ನಮ್ಮೆಲ್ಲರ ಕರ್ತವ್ಯ. ನಾವೆಲ್ಲರೂ ಕಾನೂನಿಗೆ ವಿಧೇಯರಾಗಬೇಕು. ಚೌಕಟ್ಟಿನಲ್ಲಿದ್ದಾಗ ಮಾತ್ರ ವಿದ್ಯಾರ್ಥಿ ಜೀವನ ಶಿಸ್ತು ಬರುತ್ತದೆ. ಶಾಲೆಯಲ್ಲಿ ಇರುವ ಶಿಸ್ತು ಹೊರಜಗತ್ತಿಗೂ ಬೇಕಾಗಿದೆ’ ಎಂದರು.</p>.<p>ಮುಖ್ಯ ಶಿಕ್ಷಕಿ ಪ್ರಭಾವತಿ ಅಧ್ಯಕ್ಷತೆ ವಹಿಸಿದ್ದರು. ಪಿಎಸ್ಐ ಮಹಾಂತೇಶ್ ಜಾಬಗೌಡ, ಶಾಂತಿನಿಕೇತನದ ಅಧ್ಯಕ್ಷ ಮಹೇಶ್, ನರೇಂದ್ರ ಎಸ್. ಮರಸಣಿಗೆ, ಚೇತನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೆಬ್ರಿ: ‘</strong>ಸಾಮಾಜಿಕ ಜಾಲತಾಣವನ್ನು ವಿದ್ಯಾರ್ಥಿಗಳು ಉಪಯುಕ್ತ ಮಾಹಿತಿಗೆ ಮಾತ್ರ ಬಳಸಬೇಕು. ಸುಳ್ಳು ಸುದ್ದಿಗಳನ್ನು ಹಂಚಿಕೊಳ್ಳದೆ, ಮಾದಕ ವಸ್ತುಗಳಿಂದ ದೂರ ಇದ್ದು, ವಿದ್ಯಾರ್ಥಿ ಜೀವನವನ್ನು ಯಶಸ್ವಿಗೊಳಿಸಿ’ ಎಂದು ಹೆಬ್ರಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ರವಿ ಬಿ.ಕೆ. ಹೇಳಿದರು.</p>.<p>ಹೆಬ್ರಿಯ ಕುಚ್ಚೂರು ಕುಡಿಬೈಲ್ ಶಾಂತಿನಿಕೇತನ ಯುವ ವೃಂದ ಮತ್ತು ಹೆಬ್ರಿ ಶ್ರೀರಾಘವೇಂದ್ರ ಚಾರಿಟಬಲ್ ಟ್ರಸ್ಟ್ ವತಿಯಿಂದ ಕುಚ್ಚೂರು ಹೆರ್ಗ ವಿಠಲಶೆಟ್ಟಿ ಪ್ರೌಢಶಾಲೆಯಲ್ಲಿ ನಡೆದ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಹೆತ್ತವರು ತಮ್ಮ ಮೇಲೆ ಆಸೆ ಆಕಾಂಕ್ಷೆ ಇಟ್ಟಿರುತ್ತಾರೆ. ಆದ್ದರಿಂದ ವಿದ್ಯಾರ್ಥಿಗಳು ಜಾಗೃತರಾಗಿರಬೇಕು. ಸ್ಪರ್ಧಾತ್ಮಕ ಯುಗದಲ್ಲಿ ಕೌಶಲಗಳು ಬಹಳ ಅಗತ್ಯ. ಅದನ್ನು ಕಲಿಯಿರಿ’ ಎಂದು ಪಿಎಸ್ಐ ರವಿ ಹೇಳಿದರು.</p>.<p>ಹೆಬ್ರಿ ಶ್ರೀ ರಾಘವೇಂದ್ರ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷೆ ಭಾರ್ಗವಿ ಆರ್. ಐತಾಳ್ ಮಾತನಾಡಿ, ‘ಕಾನೂನಿನ ಪಾಲನೆ ನಮ್ಮೆಲ್ಲರ ಕರ್ತವ್ಯ. ನಾವೆಲ್ಲರೂ ಕಾನೂನಿಗೆ ವಿಧೇಯರಾಗಬೇಕು. ಚೌಕಟ್ಟಿನಲ್ಲಿದ್ದಾಗ ಮಾತ್ರ ವಿದ್ಯಾರ್ಥಿ ಜೀವನ ಶಿಸ್ತು ಬರುತ್ತದೆ. ಶಾಲೆಯಲ್ಲಿ ಇರುವ ಶಿಸ್ತು ಹೊರಜಗತ್ತಿಗೂ ಬೇಕಾಗಿದೆ’ ಎಂದರು.</p>.<p>ಮುಖ್ಯ ಶಿಕ್ಷಕಿ ಪ್ರಭಾವತಿ ಅಧ್ಯಕ್ಷತೆ ವಹಿಸಿದ್ದರು. ಪಿಎಸ್ಐ ಮಹಾಂತೇಶ್ ಜಾಬಗೌಡ, ಶಾಂತಿನಿಕೇತನದ ಅಧ್ಯಕ್ಷ ಮಹೇಶ್, ನರೇಂದ್ರ ಎಸ್. ಮರಸಣಿಗೆ, ಚೇತನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>