ಉಡುಪಿ: ಕೊಟ್ಟಿಗೆಯಲ್ಲಿ ಚಿರತೆ: ಆತಂಕ

ಹೆಬ್ರಿ: ತಾಲ್ಲೂಕಿನ ಕುಚ್ಚೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾನಬೆಟ್ಟು ದಯಾನಂದ ಭಟ್ ಅವರ ಅಡಿಕೆ ಒಣಗಿಸುವ ಕೊಟ್ಟಿಗೆಯಲ್ಲಿ ಚಿರತೆ ನುಗ್ಗಿದ್ದು, ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಯಾಗಿದೆ.
ಎರಡು ದಿನಗಳಿಂದ ಕೊಟ್ಟಿಗೆಯಲ್ಲಿಯೇ ಬಂಧಿಯಾಗಿರುವ ಚಿರತೆ ಮೈಮೇಲೆ ಗಾಯಗಳಾಗಿವೆ ಎಂದು ಸ್ಥಳೀಯರು ಹೇಳುತ್ತಾರೆ. ಅರಣ್ಯ ಇಲಾಖೆಯಿಂದ ಖಚಿತ ಮಾಹಿತಿ ಲಭ್ಯವಾಗಿಲ್ಲ.
ಚಿರತೆಯು ದಯಾನಂದ್ ಭಟ್ ಅವರ ಪತ್ನಿ ಮೇಲೆ ದಾಳಿ ಮಾಡಿತ್ತು. ಈ ವೇಳೆ ಪರಚಿದ ಗಾಯಗಳಾಗಿದ್ದು ಅವರು ಹೆಬ್ರಿಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಕುಚ್ಚೂರು ಗ್ರಾಮ ಪಂಚಾಯಿತಿ ಸದಸ್ಯ ಮಹೇಶ್ ಶೆಟ್ಟಿ, ಅರಣ್ಯ ಇಲಾಖೆ ಸಿಬ್ಬಂದಿ ಬಂದು ಚಿರತೆ ಸೆರೆಗೆ ಬೋನ್ ಅಳವಡಿಸಿದ್ದಾರೆ.
ಕುಚ್ಚೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವೆಡೆ ಚಿರತೆಗಳ ಸಂಚಾರದಿಂದ ಗ್ರಾಮಸ್ಥರು ಭಯಗೊಂಡಿದ್ದು, ಚಿರತೆ ಹಿಡಿದು ಸ್ಥಳಾಂತರಿಸುವಂತೆ ಆಗ್ರಹಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.