<p><strong>ಉಡುಪಿ: </strong>ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಕ್ರೀಡೆಗೆ ಪ್ರೋತ್ಸಾಹ ಕಡಿಮೆ ಎಂದು ಕಾಮನ್ವೆಲ್ತ್ ಗೇಮ್ಸ್ನಲ್ಲಿ ಕಂಚಿನ ಪದಕ ವಿಜೇತರಾದ ಕುಂದಾಪುರದ ಗುರುರಾಜ ಪೂಜಾರಿ ಬೇಸರ ವ್ಯಕ್ತಪಡಿಸಿದರು.</p>.<p>ಜಿಲ್ಲಾಡಳಿತದಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ವೇಯ್ಟ್ ಲಿಫ್ಟಿಂಗ್ ತರಬೇತಿಗೆ ತಿಂಗಳಿಗೆ ₹ 30 ರಿಂದ ₹ 40 ಸಾವಿರ ವ್ಯಯವಾಗುತ್ತದೆ. ಕ್ರೀಡಾಪಟುಗಳಿಗೆ ಪ್ರೋತ್ಸಾಹ ಹಾಗೂ ಉದ್ಯೋಗಗಳನ್ನು ನೀಡಿದರೆ ದೇಶಕ್ಕೆ ಹೆಚ್ಚು ಪದಕಗಳು ಬರಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p>8 ವರ್ಷಗಳಿಂದ ಚಂಡಿಘಡದ ಏರ್ಫೋರ್ಸ್ನಲ್ಲಿ ಸೇವೆ ಸಲ್ಲಿಸುತ್ತಿದ್ದು, ಸ್ವಂತ ಊರುಬಿಟ್ಟು ಬೇರೆಡೆ ಕರ್ತವ್ಯ ನಿರ್ವಹಿಸುವುದು ಕಷ್ಟವಾಗುತ್ತದೆ. ರಾಜ್ಯದಲ್ಲಿ ಉದ್ಯೋಗ ನೀಡಿದರೆ ಹೆಚ್ಚು ಅನುಕೂಲವಾಗುತ್ತದೆ ಎಂದು ಗುರುರಾಜ ಪೂಜಾರಿ ಮನವಿ ಮಾಡಿದರು.</p>.<p>ರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ಪದಕ ಗೆದ್ದವರಿಗೆ ರಾಜ್ಯ ಸರ್ಕಾರ ನೀಡುವ ತಡವಾಗಿ ಪ್ರೋತ್ಸಾಹ ಧನ ಬಿಡುಗಡೆ ಮಾಡುತ್ತಿದೆ. ಅಂತರ ರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ಪದಕ ಗೆದ್ದವರಿಗೆ ಬೆಲೆ ಇಲ್ಲದಾಗಿದೆ. ಬೇರೆ ರಾಜ್ಯಗಳಲ್ಲಿ ಕಂಚು ಗೆದ್ದ ಕ್ರೀಡಾಪಟುಗಳಿಗೆ ₹ 40 ರಿಂದ ₹ 50 ಲಕ್ಷ ಪ್ರೋತ್ಸಾಹ ಧನ ಘೋಷಿಸಿದರೆ ಕರ್ನಾಟಕದಲ್ಲಿ ಕೇವಲ ₹ 8 ಲಕ್ಷ ಘೋಷಿಸಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯದ ಕ್ರೀಡಾಪಟುಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಿದರೆ ಆಟಗಾರರು ಹೆಚ್ಚು ಪದಕಗಳನ್ನು ಗೆಲ್ಲಲ್ಲಿದ್ದಾರೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ: </strong>ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಕ್ರೀಡೆಗೆ ಪ್ರೋತ್ಸಾಹ ಕಡಿಮೆ ಎಂದು ಕಾಮನ್ವೆಲ್ತ್ ಗೇಮ್ಸ್ನಲ್ಲಿ ಕಂಚಿನ ಪದಕ ವಿಜೇತರಾದ ಕುಂದಾಪುರದ ಗುರುರಾಜ ಪೂಜಾರಿ ಬೇಸರ ವ್ಯಕ್ತಪಡಿಸಿದರು.</p>.<p>ಜಿಲ್ಲಾಡಳಿತದಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ವೇಯ್ಟ್ ಲಿಫ್ಟಿಂಗ್ ತರಬೇತಿಗೆ ತಿಂಗಳಿಗೆ ₹ 30 ರಿಂದ ₹ 40 ಸಾವಿರ ವ್ಯಯವಾಗುತ್ತದೆ. ಕ್ರೀಡಾಪಟುಗಳಿಗೆ ಪ್ರೋತ್ಸಾಹ ಹಾಗೂ ಉದ್ಯೋಗಗಳನ್ನು ನೀಡಿದರೆ ದೇಶಕ್ಕೆ ಹೆಚ್ಚು ಪದಕಗಳು ಬರಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p>8 ವರ್ಷಗಳಿಂದ ಚಂಡಿಘಡದ ಏರ್ಫೋರ್ಸ್ನಲ್ಲಿ ಸೇವೆ ಸಲ್ಲಿಸುತ್ತಿದ್ದು, ಸ್ವಂತ ಊರುಬಿಟ್ಟು ಬೇರೆಡೆ ಕರ್ತವ್ಯ ನಿರ್ವಹಿಸುವುದು ಕಷ್ಟವಾಗುತ್ತದೆ. ರಾಜ್ಯದಲ್ಲಿ ಉದ್ಯೋಗ ನೀಡಿದರೆ ಹೆಚ್ಚು ಅನುಕೂಲವಾಗುತ್ತದೆ ಎಂದು ಗುರುರಾಜ ಪೂಜಾರಿ ಮನವಿ ಮಾಡಿದರು.</p>.<p>ರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ಪದಕ ಗೆದ್ದವರಿಗೆ ರಾಜ್ಯ ಸರ್ಕಾರ ನೀಡುವ ತಡವಾಗಿ ಪ್ರೋತ್ಸಾಹ ಧನ ಬಿಡುಗಡೆ ಮಾಡುತ್ತಿದೆ. ಅಂತರ ರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ಪದಕ ಗೆದ್ದವರಿಗೆ ಬೆಲೆ ಇಲ್ಲದಾಗಿದೆ. ಬೇರೆ ರಾಜ್ಯಗಳಲ್ಲಿ ಕಂಚು ಗೆದ್ದ ಕ್ರೀಡಾಪಟುಗಳಿಗೆ ₹ 40 ರಿಂದ ₹ 50 ಲಕ್ಷ ಪ್ರೋತ್ಸಾಹ ಧನ ಘೋಷಿಸಿದರೆ ಕರ್ನಾಟಕದಲ್ಲಿ ಕೇವಲ ₹ 8 ಲಕ್ಷ ಘೋಷಿಸಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯದ ಕ್ರೀಡಾಪಟುಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಿದರೆ ಆಟಗಾರರು ಹೆಚ್ಚು ಪದಕಗಳನ್ನು ಗೆಲ್ಲಲ್ಲಿದ್ದಾರೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>